ತೆರಳಲಿದೆ ಚೆನ್ನೈಗೆ ಕನ್ನಡ ಚಲನಚಿತ್ರ ಕಲಾವಿದರ ನಿಯೋಗ
ಬೆಂಗಳೂರು : ಸದನದಲ್ಲಿ ರಾಜ್ಕುಮಾರ್ ಅಪಹರಣ ವಿಷಯ ಪ್ರತಿಧ್ವನಿಸಿದೆ. ಮಂಗಳವಾರದ ಅನಿರೀಕ್ಷಿತ ಬೆಳವಣಿಗೆಯಲ್ಲಿ ನೆಡುಮಾರನ್ ಸಂಧಾನಕ್ಕೆ ಕಾಡಿಗೆ ಹೋಗಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಸರಕಾರ ಏನು ಕ್ರಮ ಕೈಗೊಂಡಿದೆ ಎಂಬುದು ಪ್ರತಿಪಕ್ಷಗಳ ಪ್ರಶ್ನೆಯಾಗಿದೆ. ರಾಜ್ಕುಮಾರ್ ಅಪಹರಣ 102 ದಿನಕ್ಕೆ ಕಾಲಿಟ್ಟಿದೆ.
ವೀರಪ್ಪನ್ ಅಟ್ಟಹಾಸಕ್ಕೆ ಕೊನೆ ಇಲ್ಲವೇ? ಸರಕಾರ ಹೀಗೆ ಕೈಕಟ್ಟಿ ಕುಳಿತರೆ ಮುಂದೇನು ಗತಿ ಎಂಬ ಪ್ರಶ್ನೆಯೂ ಎದುರಾಗಿದೆ. ಇದು ಕೇವಲ ರಾಜ್ಕುಮಾರ್ ಅವರೊಬ್ಬರ ಪ್ರಶ್ನೆಯಾಗಿ ಮಾತ್ರ ಉಳಿದಿಲ್ಲ. ಪ್ರತಿಯಾಬ್ಬ ಪ್ರಜೆಗೂ ರಕ್ಷಣೆ ನೀಡಬೇಕಾದ ಸರಕಾರ ಏನು ಕ್ರಮ ಕೈಗೊಳ್ಳುತ್ತದೆ ಎನ್ನುವ ಬಗ್ಗೆ ಸರ್ವತ್ರ ಚರ್ಚೆ ನಡೆಯುತ್ತಿದೆ.
ತಮಿಳು ನಾಡು ಹಾಗೂ ಕರ್ನಾಟಕ ಸರಕಾರಗಳೆರಡೂ ಪರ್ಯಾಯ ಕಾರ್ಯತಂತ್ರ ರೂಪಿಸುವ ಬಗ್ಗೆ ಗಂಭೀರ ಚರ್ಚೆ ನಡೆಸಬೇಕು ಹಾಗೂ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂಬ ಸಲಹೆಗಳೂ ಬರುತ್ತಿವೆ. ನೆಡುಮಾರನ್ ಸಂಧಾನಕ್ಕೆ ಹೋಗಲೊಪ್ಪದಿದ್ದರೆ, ಯಾರನ್ನು ಸಂಧಾನಕ್ಕಾಗಿ ಕಳುಹಿಸುತ್ತೀರಿ ಎಂದು ಪ್ರತಿಪಕ್ಷಗಳು ಪ್ರಶ್ನಿಸಿವೆ. ಆದರೆ, ಸರಕಾರದಿಂದ ತತ್ಕ್ಷಣಕ್ಕೆ ಯಾವುದೇ ಉತ್ತರ ಸಿಕ್ಕಿಲ್ಲ.
ಚೆನ್ನೈಗೆ ಚಿತ್ರಕಲಾವಿದ ನಿಯೋಗ : ಈ ಮಧ್ಯೆ ರಾಜ್ಕುಮಾರ್ ಅವರ ಬಿಡುಗಡೆಗೆ ಸಂಧಾನ ಮಾರ್ಗ ಮುಂದುವರಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರನ್ನು ಕೋರುಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಕೆ.ಸಿ.ಎನ್. ಚಂದ್ರು ಅವರ ನೇತೃತ್ವದ ತಂಡ ಚೆನ್ನೈಗೆ ತೆರಳಲಿದೆ. ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು, ರಾಕ್ಲೈನ್ ವೆಂಕಟೇಶ್, ಎಚ್.ಎನ್. ಮಾರುತಿ ಮತ್ತಿತರ ಕಲಾವಿದರು ನಿಯೋಗದಲ್ಲಿದ್ದಾರೆ.
ನೆಡುಮಾರನ್ಗೆ ಮನವಿ : ಚೆನ್ನೈಗೆ ತೆರಳಿರುವ ರಾಜ್ಯ ಚಲನಚಿತ್ರ ಕಲಾವಿದರ ನಿಯೋಗವು ರಾಜಕೀಯ ವಿವಾದವನ್ನು ಲೆಕ್ಕಿಸದೆ, ಕನ್ನಡದ ಮೇರು ನಟನನ್ನು ವೀರಪ್ಪನ್ ವಶದಿಂದ ಬಿಡಿಸಿಕೊಂಡು ಬರಲು ಕಾಡಿಗೆ ತೆರಳುವಂತೆ ನೆಡುಮಾರನ್ ಅವರಲ್ಲಿ ಮನವಿ ಮಾಡಿದೆ.
ವಾರ್ತಾ ಸಂಚಯ
ಮುಖಪುಟ / ರಾಜ್ ಅಪಹರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications