ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಡುಪಿಯಲ್ಲಿ 13,14 ರಂದು ಕನಕ ಜಯಂತ್ಯುತ್ಸವ

By Staff
|
Google Oneindia Kannada News

ಬೆಂಗಳೂರು : ಶ್ರೀ ಕಾಗಿನೆಲೆ ಮಹಾ ಸಂಸ್ಥಾನ ಕನಕಗುರು ಪೀಠ ಹಾಗೂ ಉಡುಪಿ ಪೇಜಾವರ ಮಠದ ಸಂಯುಕ್ತಾಶ್ರಯದಲ್ಲಿ ನ.13 ಮತ್ತು 14ರಂದು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕನಕ ಜಯಂತ್ಯುತ್ಸವ ಜರುಗಲಿದೆ.

ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ನವೆಂಬರ್‌ 13ರಂದು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಆದಿ ಚುಂಚನಗಿರಿಯ ಬಾಲ ಗಂಗಾಧರನಾಥ ಸ್ವಾಮೀಜಿ, ಧರ್ಮಸ್ಥಳದ ವೀರೇಂದ್ರ ಹೆಗಡೆ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಮುಖ್ಯ ಅಥಿತಿಗಳಾಗಿ ಆಗಮಿಸುತ್ತಿದ್ದಾರೆ ಎಂದು ಶ್ರೀ ಕಾಗಿನೆಲೆ ಮಹಾ ಸಂಸ್ಥಾನದ ಬಿರೇಂದ್ರ ಕೇಶವ ತಾರಕಾನಂದಪುರಿ ಸ್ವಾಮೀಜಿಗಳು ತಿಳಿಸಿದ್ದಾರೆ.

ನ.14ರಂದು ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರುಗಳಾದ ಎಲ್‌.ಕೆ. ಆಡ್ವಾಣಿ, ಅನಂತಕುಮಾರ್‌, ರಾಜ್ಯಪಾಲರಾದ ವಿ.ಎಸ್‌. ರಮಾದೇವಿ ಪಾಲ್ಗೊಳ್ಳುತ್ತಿದ್ದಾರೆಂದ ಅವರು, ಜಯಂತ್ಯುತ್ಸವದ ಅಂಗವಾಗಿ ಕನಕದಾಸರ ಕುರಿತು ವಿಚಾರ ಸಂಕಿರಣ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಮುಖಪುಟ / ಊರು ಕೇರಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X