ರಾಜ್ಯ ಪ್ರವಾಸೋದ್ಯಮ ನಿಗಮದ ಮೈಗಳ್ಳತನಕ್ಕೆ ಸದನದಲ್ಲಿ ಛೀಮಾರಿ
ಬೆಂಗಳೂರು : ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯಿಂದಾಗಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ತಾನು ಗುತ್ತಿಗೆ ಪಡೆದಿರುವ 1.16 ಕೋಟಿ ರೂಪಾಯಿ ಮೌಲ್ಯದ ಸುಮಾರು ಆರು ಸಾವಿರ ಚದರ ಅಡಿ ಪ್ರದೇಶವನ್ನು ಬಳಸಿಕೊಳ್ಳದೆ ಇರುವುದರಿಂದ ಕಳೆದುಕೊಂಡಿದೆ.
ಶುಕ್ರವಾರದಂದು ಸಾರ್ವಜನಿಕ ಉದ್ಯಮ ಕುರಿತು ಸದನದಲ್ಲಿ ಮಂಡಿಸಿದ ವರದಿಯಲ್ಲಿ ಈ ವಿಷಯ ತಿಳಿಸಲಾಗಿದೆ. ಸರಕಾರ ನೀಡಿದ ಜಾಗದಲ್ಲಿ ಕಳೆದ 24ವರ್ಷಗಳಿಂದ ಕಟ್ಟಡ ನಿರ್ಮಾಣ ಮಾಡುವಲ್ಲಿ ಕೆಎಸ್ಟಿಡಿಸಿ ತೀರಾ ನಿರಾಸಕ್ತಿ ಹೊಂದಿದ್ದರ ಪರಿಣಾಮವಾಗಿ ಈ ಜಾಗ ಕೈ ಬಿಟ್ಟು ಹೋಗುತ್ತಿದೆ. ಇಂತಹುದೇ ಇನ್ನೊಂದು ವರದಿಯ ಪ್ರಕಾರ ಉಡುಪಿಯ ಮಲ್ಪೆ ಬೀಚ್ನಲ್ಲಿ ರೆಸಾರ್ಟ್ ನಿರ್ಮಾಣ ಮಾಡಬೇಕಾಗಿದ್ದು , ಕೆಎಸ್ಟಿಡಿಸಿ ತನ್ನ ಮೈಗಳ್ಳತನ ಪ್ರದರ್ಶಿಸಿದೆ. ಸಾಕಷ್ಟು ತಂತ್ರಜ್ಞಾನವಿಲ್ಲದೆ ಮಲ್ಪೆ ಬೀಚ್ನಲ್ಲಿ ರೆಸಾರ್ಟ್ ನಿರ್ಮಾಣ ಕಾರ್ಯವನ್ನು ವಹಿಸಿಕೊಂಡಿರುವುದೇ ತಪ್ಪು. ಅಲ್ಲದೆ ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ಮೊದಲೇ ಅನುಮತಿ ಪಡೆಯದೇ ಇರುವುದು ಕಾನೂನಿಗೆ ವಿರುದ್ಧವಾದುದು. ಈ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ವರದಿಯಲ್ಲಿ ಹೇಳಲಾಗಿದೆ.
ಉಪಗುತ್ತಿಗೆ ನೀಡುವುದು ನಿಗಮದ ಕಾನೂನಿಗೆ ಸಮ್ಮತವಾದುದಲ್ಲ. ಅಲ್ಲದೆ ಬೀದರ್ನಲ್ಲಿ ಉಪಗುತ್ತಿಗೆದಾರರಾಗಿರುವ ಬರಿದ್ ಶಾಹಿ ಮಯೂರ ಗುಂಪು ಬಾಕಿ ಇರಿಸಿಕೊಂಡಿರುವ 5.62 ಲಕ್ಷ ರೂಪಾಯಿಯನ್ನು ವಸೂಲಿ ಮಾಡುವ ಕುರಿತೂ ಯಾವುದೇ ಪ್ರಯತ್ನ ನಡೆದಿಲ್ಲ. ಕೈಬಿಟ್ಟು ಹೋಗುತ್ತಿರುವ ಜಾಗವನ್ನು ಮತ್ತೆ ದೊರಕಿಸಿಕೊಳ್ಳುವ ಬಗ್ಗೆಯೂ ಕೆಎಸ್ಟಿಡಿಸಿ ಪ್ರಯತ್ನ ನಡೆಸಿಲ್ಲ ಎಂದು ವರದಿ ಕೆಎಸ್ಟಿಡಿಸಿಗೆ ಛೀಮಾರಿ ಹಾಕಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications