ಸ್ಮಶಾನ ಭೂಮಿ ವಿವಾದ ರಾಣೆಬೆನ್ನೂರು ಉದ್ರಿಕ್ತ
ಹುಬ್ಬಳ್ಳಿ: ಎರಡು ಉದ್ರಿಕ್ತ ಸಮುದಾಯಗಳ ನಡುವೆ ನಡೆಯುತ್ತಿದ್ದ ಘರ್ಷಣೆ ತಪ್ಪಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿ, ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಇಲ್ಲಿಗೆ 90 ಕಿಲೋಮೀಟರ್ ದೂರದ ರಾಣೆಬೆನ್ನೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ.
ರುದ್ರ ಭೂಮಿಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕೊಮುಗಳ ನಡುವೆ ಉಂಟಾದ ಮಾತಿನ ಚಕಮಕಿ, ಪರಸ್ಪರ ಕಲ್ಲು ತೂರುವ ಹಂತ ಮುಟ್ಟಿದಾಗ ಪೋಲೀಸರು ಲಾಠಿ ಚಾರ್ಜ್ ಮಾಡಿದರು. ಗುಂಪುಗಳು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡಿದರು. ಈ ಹಂತದಲ್ಲಿ ಉದ್ರಿಕ್ತ ಗುಂಪೊಂದು ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿತಲ್ಲದೆ ಆಟೋರಿಕ್ಷಾ ಮತ್ತು ಇತರ ಕೆಲವು ವಾಹನಗಳಿಗೆ ಕಲ್ಲು ತೂರಿತು. ಘರ್ಷಣೆ ಮುಂದುವರಿದಾಗ ಗುಂಪು ಚದುರಿಸಲು ಗಾಳಿಯಲ್ಲಿ ಗುಂಡು ಹಾರಿಸಿ ಚದುರಿಸಲಾಯಿತೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ಹಿನ್ನೆಲೆ : ಪಟ್ಟಣದ ಬಸ್ ನಿಲ್ದಾಣದ ಸಮೀಪ ಇದ್ದ ಸ್ಮಶಾನ ಯಾರಿಗೆ ಸೇರಬೇಕು ಎಂಬ ಬಗ್ಗೆ ಎರಡು ಸಮುದಾಯಗಳ ನಡುವೆ ಕಳೆದ ಕೆಲವು ವರ್ಷಗಳಿಂದ ವಿವಾದ ನಡೆಯುತ್ತಿತ್ತು.
ವಿವಾದಿತ ಭೂಮಿಯಲ್ಲಿ ಎರಡು ಕಟ್ಟಡಗಳ ಕೆಲಸ ನಡೆಯುತ್ತಿತ್ತು. ಇತ್ತೀಚೆಗೆ ಜಿಲ್ಲಾಧಿಕಾರಿಗಳು ವಿವಾದ ಬಗೆಹರಿಸಿ ಎರಡೂ ಕಟ್ಟಡಗಳನ್ನೂ ಒಡೆಸಿಹಾಕಿದ್ದರು. ಶನಿವಾರ ಸಂಜೆ ಒಂದು ಸಮುದಾಯದವರು ತಮ್ಮ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸಲು ಮತ್ತು ಅಲ್ಲಿರುವ ದೇವಾಲಯದಲ್ಲಿ ಪೂಜೆ ಮಾಡಲು ಸೇರಿದ್ದರು. ಸ್ಮಶಾನಕ್ಕೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ್ದನ್ನು ಇನ್ನೊಂದು ಸಮುದಾಯದವರು ಆಕ್ಷೇಪಿಸಿದಾಗ ಈ ಘಟನೆ ನಡೆದಿದೆ. ಗುಂಪುಗಳ ದಾಳಿಯಲ್ಲಿ ಐದು ಅಂಗಡಿಗಳನ್ನೂ ಲೂಟಿ ಮಾಡಲಾಗಿದೆ.
ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಉದ್ರಿಕ್ತವಾಗೇ ಇದೆ. ಪಟ್ಟಣದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications