ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗುವುದೆಂದು?
ಬೆಂಗಳೂರು : ವಿಘ್ನೕಶ್ವರನ ಮದುವೆಗೇ ನೂರೆಂಟು ವಿಘ್ನ ಎಂಬ ಮಾತಿದೆ. ದೇವನ ಹಳ್ಳಿ ವಿಮಾನ ನಿಲ್ದಾಣಕ್ಕೂ ಇದು ಅನ್ವಯಿಸುತ್ತದೆ. ಹೆಸರೇ ದೇವನ ಹಳ್ಳಿ ಅಲ್ಲವೇ... ಇಲ್ಲಿ ನಿರ್ಮಾಣವಾಗಬೇಕಿರುವ ವಿಮಾನ ನಿಲ್ದಾಣಕ್ಕೆ ದೇವರೆ ದಯೆ ತೋರುಬೇಕೋ ಏನೋ...
ನವೆಂಬರ್ 1ರಂದು ಈ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಆಗುತ್ತದೆ, ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರೇ ಶಂಕುಸ್ಥಾಪನೆ ನೆರವೇರಿಸುತ್ತಾರೆ ಎಂಬ ಸಚಿವ ಜಾನ್ರ ಭರವಸೆಗಳೆಲ್ಲವೂ ಹುಸಿಯಾಗಿದೆ. ಈ ವಿಷಯ ವಿಧಾನ ಪರಿಷತ್ತಿನಲ್ಲಿ ಸೋಮವಾರ ಭಾರಿ ವಾಗ್ವಾದಕ್ಕೂ ಕಾರಣವಾಗಿತ್ತು. ಅಲ್ಲಿ ಸಚಿವರು ನೀಡಿರುವ ಮಾಹಿತಿಯಂತೆ ಮೇ ತಿಂಗಳಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ಆರಂಭವಾಗಲಿದೆ.
ಕಾಮಗಾರಿ ಆರಂಭವಾದ 36 ತಿಂಗಳಲ್ಲಿ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧವಾಗಲಿದೆ. ಇದಕ್ಕೂ ಮುನ್ನ ಮಾರ್ಚ್ - ಏಪ್ರಿಲ್ ತಿಂಗಳಿನಲ್ಲಿ ಕಂಪನಿಯಾಂದರ ಜತೆ ಒಪ್ಪಂದಕ್ಕೆ ಬರಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರ ಪ್ರಶ್ನೆಗೆ ಉತ್ತರಿಸಿದ ಭಾರಿ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ 150 ಕೋಟಿ ರುಪಾಯಿ ಹುಡ್ಕೋದಿಂದ ಸಾಲ ಪಡೆಯಲು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮಕ್ಕೆ ಅನುಮತಿ ನೀಡಲಾಗಿದೆ ಎಂದೂ ಸಚಿವರು ಹೇಳಿದರು. 15 ದಿನದಲ್ಲಿ ಸಾಲ ಮಂಜೂರಾಗಲಿದ್ದು, ಇನ್ನು ಮೂರು ತಿಂಗಳಲ್ಲಿ ಭೂಸ್ವಾಧೀನ ಕಾರ್ಯ ಮುಗಿಯುತ್ತದೆ ಎಂದರು.
ವಿಮಾನ ನಿಲ್ದಾಣ ಕಾಮಗಾರಿ ಕೈಗೊಳ್ಳಲು ಸುಮಾರು 18 ಅರ್ಜಿಗಳು ಬಂದಿದ್ದು, ಎಲ್ ಅಂಡ್ ಟಿ ಹಾಗೂ ಸೀಮನ್ಮೂಲದ ಕಂಪನಿಗಳಿಗೆ ಯೋಜನೆ ವರದಿ ನೀಡಲು ಕೇಳಲಾಗಿದೆ. ಏಪ್ರಿಲ್ ತಿಂಗಳೊಳಗೆ ಕಂಪನಿಯಾಂದರ ಜತೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದರು ದೇಶಪಾಂಡೆ.
1994ರಲ್ಲೇ ಈ ಯೋಜನೆ ಆರಂಭವಾಗಬೇಕಿತ್ತು ಆದರೆ, ರಾಜಕೀಯ ಕಾರಣಗಳಿಂದ ತಡವಾಯ್ತು, ಈ ರಾಜಕೀಯ ವಿವಾದಗಳ ಬಗ್ಗೆ ನಾನು ಮಾತನಾಡಲು ಇಚ್ಛಿಸುವುದಿಲ್ಲ ಎಂದು ಸಚಿವರು ಹೇಳಿದಾಗ ನಾಣಯ್ಯನವರಿಂದ ಪ್ರತಿರೋಧ, ಭಾರಿ ಗದ್ದಲ - ವಾಗ್ವಾದ. ಸಭಾಧ್ಯಕ್ಷರ ಮನವಿಗೂ ಮಾನ್ಯತೆ ಸಿಗದ ಸ್ಥಿತಿ. ಅಂತೂ ಗದ್ದಲದ ನಡುವೆ ಮತ್ತೆ ಈ ವಿಷಯದ ಮೇಲೆ ಚರ್ಚೆಗೆ ಅವಕಾಶ ದೊರಕಲಿಲ್ಲ. ಮೇ ತಿಂಗಳಿನಲ್ಲಾದರೂ ಕಾಮಗಾರಿ ಆರಂಭವಾದೀತೆ ಎಂದು ಕಾದು ನೋಡೋಣ.
ವಾರ್ತಾ ಸಂಚಯ
ಮುಖಪುಟ / ವಿಧಾನ ಮಂಡಲ
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications