ಮಾಧವನ್ರನ್ನು ನಾನು ಭೇಟಿ ಮಾಡುವುದಿಲ್ಲ: ಅಜಯ್ ಶರ್ಮ
ನವ ದೆಹಲಿ : ಮೋಸದಾಟ ಪ್ರಕರಣದಲ್ಲಿ ಸಿಬಿಐ ಹೆಸರಿಸಿರುವ ಐವರು ಆಟಗಾರರಲ್ಲಿ ಒಬ್ಬರಾದ ಮಾಜಿ ಕ್ರಿಕೆಟ್ ತಾರೆ ಅಜಯ್ ಶರ್ಮ ಅವರು, ಮ್ಯಾಚ್ ಫಿಕ್ಸಿಂಗ್ ಬಗ್ಗೆ ತನಿಖೆ ನಡೆಸುತ್ತಿರುವ ಬಿಸಿಸಿಐನ ವಿಶೇಷ ಆಯುಕ್ತ ಮಾಧವನ್ ಎದುರು ಹಾಜರಾಗಲು ನಿರಾಕರಿಸಿದ್ದಾರೆ.
ಈವರೆಗೂ ನನಗೆ ಸಿಬಿಐ ತನಿಖೆಯ ಪ್ರತಿ ದೊರೆತಿಲ್ಲ . ಆದ್ದರಿಂದ ತಮ್ಮನ್ನು ಭೇಟಿಯಾಗುವ ಪ್ರಶ್ನೆಯೇ ಇಲ್ಲ ಎಂದು ಅಜಯ್ ಶರ್ಮ ಅವರು ತಮಗೆ ಪತ್ರ ಬರೆದಿದ್ದಾರೆ ಎಂದು ಮಾಧವನ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ತನಿಖೆಯ ಸಂಬಂಧ ಮಂಗಳವಾರ ತಮ್ಮನ್ನು ಭೇಟಿಯಾಗುವಂತೆ ಮಾಧವನ್ ಅವರು ಈ ಮೊದಲು ಅಜಯ್ ಶರ್ಮ ಅವರಿಗೆ ಸೂಚಿಸಿದ್ದರು.
ಅಜಯ್ ಶರ್ಮ ಅವರ ನಿರಾಕರಣೆಯಿಂದ ನನಗೆ ಆಶ್ಚರ್ಯವಾಗಿದೆ. ಬೆನ್ನು ನೋವಿನಿಂದ ಬಳಲುತ್ತಿರುವುದರಿಂದ ತನಿಖೆಗಾಗಿ ಚೆನ್ನೈಗೆ ಬರಲು ಸಾಧ್ಯವಿಲ್ಲ , ದೆಹಲಿಯಲ್ಲೇ ವಿಚಾರಣೆಗೆ ಸಿದ್ಧ ಎಂದು ಈ ಮೊದಲು ತಿಳಿಸಿದ್ದರು. ಆಗ ಸಿಬಿಐ ತನಿಖೆಯ ಬಗ್ಗೆ ಚಕಾರ ಎತ್ತದ ಅವರು ಏಕಾಏಕಿ ವರಸೆ ಬದಲಿಸಿರುವುದು ಆಶ್ಚರ್ಯ ತಂದಿದೆ ಎಂದು ಮಾಧವನ್ ಹೇಳಿದ್ದಾರೆ.
ಸಿಬಿಐ ವರದಿಯಲ್ಲಿ ಹೆಸರಿಸಿರುವ ಅಜಯ್ ಜಡೇಜ, ಮನೋಜ್ ಪ್ರಭಾಕರ್, ನಯನ್ ಮೊಂಗಿಯ, ಡಾ. ಆಲಿ ಇರಾನಿ ಅವರು ಈಗಾಗಲೇ ಮಾಧವನ್ ಅವರನ್ನು ಭೇಟಿ ಮಾಡಿದ್ದಾರೆ. ಆದರೆ, ಪ್ರಮುಖ ಆರೋಪಿ ಎನ್ನಲಾದ ಅಜರುದ್ದೀನ್ ಈವರೆಗೂ ಬಿಸಿಸಿಐ ಆಯುಕ್ತರ ಮುಂದೆ ಹಾಜರಾಗಿಲ್ಲ . ಅಜರ್ ಬಯಸಿದರೂ ಇನ್ನು ಮುಂದೆ ನಾನವರನ್ನು ಪ್ರಶ್ನಿಸಲು ಬಯಸುವುದಿಲ್ಲ ಎಂದು ಮಾಧವನ್ ಹೇಳಿದ್ದಾರೆ. ಆದರೆ, ಅಜಯ್ ಶರ್ಮ ಅವರು ತಮ್ಮ ನಿಲುವು ಬದಲಿಸಿಕೊಂಡಲ್ಲಿ ಅವರಿಗೆ ಮತ್ತೊಂದು ಅವಕಾಶ ಮಾಡಿಕೊಡಲಾಗುವುದು ಎಂದಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications