ನವೆಂಬರ್ 15ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ
ಬೆಂಗಳೂರು : ಸರಕಾರದ ಮೂರು ಕ್ರಮಗಳನ್ನು ವಿರೋಧಿಸಿ ಬ್ಯಾಂಕ್ ನೌಕರರ ಸಂಘಗಳ ಸಂಯುಕ್ತ ವೇದಿಕೆ ಬುಧವಾರ (ನ.15) ನಡೆಸಲು ಉದ್ದೇಶಿಸಿರುವ ಒಂದು ದಿನದ ಬ್ಯಾಂಕ್ ಮುಷ್ಕರಕ್ಕೆ ರಾಜ್ಯ ಬ್ಯಾಂಕ್ ಉದ್ಯೋಗಿಗಳ ಬೆಂಬಲವೂ ವ್ಯಕ್ತವಾಗಿದೆ. ಜೀವ ವಿಮಾ ನಿಗಮದ ನೌಕರರೂ ಈ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ.
ಖಾಸಗೀಕರಣ, ನಿವೃತ್ತಿ ವಯಸ್ಸನ್ನು 60ರಿಂದ 58ಕ್ಕೆ ಇಳಿಸುವುದೂ ಸೇರಿದಂತೆ ಕೇಂದ್ರ ಸರಕಾರದ ಕ್ರಮಗಳನ್ನು ವಿರೋಧಿಸಲು ಕೆಲಸ ಸ್ಥಗಿತಗೊಳಿಸಿ ಒಂದು ದಿನದ ಮುಷ್ಕರ ನಡೆಸುವುದು ಅನಿವಾರ್ಯವಾಗಿದೆ ಎಂದು ಸಂಯುಕ್ತ ವೇದಿಕೆಯ ಬಿ.ಎಸ್. ವೆಂಕಟನರಸಯ್ಯ ಹಾಗೂ ಶಾಂತರಾಜ್ ತಿಳಿಸಿದ್ದಾರೆ.
ರಾಷ್ಟ್ರೀಕೃತ ಹಾಗೂ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಸರಕಾರ ತೊಡಗಿಸಿರುವ ಬಂಡವಾಳ ಹಿಂತೆಗೆತ, ಸ್ವಯಂ ನಿವೃತ್ತಿ ಯೋಜನೆ, ನಿವೃತ್ತಿ ವಯಸ್ಸಿನ ಇಳಿಕೆ ಮುಂತಾದ ಕ್ರಮಗಳು ಖಾಸಗೀಕರಣದ ಸೂಚಕವಾಗಿವೆ ಎಂದು ಅವರು ಆರೋಪಿಸಿದರು. ನಮ್ಮ ಈ ಮುಷ್ಕರಕ್ಕೆ ಸರಕಾರ ಮಣಿಯದಿದ್ದರೆ, ಬೃಹತ್ ಹೋರಾಟ ರೂಪಿಸುವುದಾಗಿ ಅವರು ಎಚ್ಚರಿಕೆ ನೀಡಿದರು.
ಸಾರ್ವಜನಿಕ ವಲಯದ ಬ್ಯಾಂಕ್ಗಳ ಖಾಸಗೀಕರಣ ಕುರಿತಂತೆ ಸರಕಾರ ಮತ್ತು ಬ್ಯಾಂಕ್ ಸಂಘಗಳ ವೇದಿಕೆ ನಡುವೆ ಇತ್ತೀಚೆಗೆ ದೆಹಲಿಯಲ್ಲಿ ನಡೆದ ಮಾತುಕತೆಗಳು ಮುರಿದು ಬಿದ್ದ ಹಿನ್ನೆಲೆಯಲ್ಲಿ, ಭಾರತೀಯ ಬ್ಯಾಂಕ್ ಸಂಘಟನೆಗಳು ನವೆಂಬರ್ 15ರ ಬುಧವಾರ ಒಂದು ದಿನದ ರಾಷ್ಟ್ರ ವ್ಯಾಪಿ ಮುಷ್ಕರ ಹೂಡಲು ನಿರ್ಧರಿಸಿದ್ದವು ಎಂಬುದನ್ನು ಇಲ್ಲಿ ಸ್ಮರಿಸಬಹುದು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications