ಕ್ರಿಕೆಟ್ ‘ಕಳ್ಳ’ರನ್ನು ದಂಡಿಸುವುದು ಬಲು ಕಷ್ಟ- ಕಾನೂನು ಸಚಿವಾಲಯ
ನವದೆಹಲಿ : ಮ್ಯಾಚ್ಫಿಕ್ಸಿಂಗ್ನಲ್ಲಿ ಶಾಮೀಲಾಗಿದ್ದಾರೆ ಎನ್ನಲಾಗಿರುವ ಕ್ರಿಕೆಟಿಗರನ್ನು ಈಗ ಸಿಕ್ಕಿರುವ ಸಾಕ್ಷ್ಯಾಧಾರಗಳ ಮೇಲೆ ಶಿಕ್ಷಿಸುವುದು ಬಲು ಕಷ್ಟ ಎಂದು ಕಾನೂನು ಸಚಿವಾಲಯ ಮಂಗಳವಾರ ಸ್ಪಷ್ಟಪಡಿಸಿದೆ.
ಭಾರತೀಯ ದಂಡ ಸಂಹಿತೆಯ ಪ್ರಕಾರ ಆರೋಪಿ ಸ್ಥಾನದಲ್ಲಿರುವ ಐವರೂ ಕ್ರಿಕೆಟಿಗರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಇದನ್ನು ಕಾನೂನು ಸಚಿವಾಲಯ ವಿವರಿಸುವುದು ಹೀಗೆ...
- ಅಜರ್ ಮತ್ತು ಅಜಯ್ ಶರ್ಮ ಸಾರ್ವಜನಿಕ ಸೇವಾ ಸಂಸ್ಥೆಗಳಲ್ಲಿ ವೃತ್ತಿದಾರರಾಗಿದ್ದು, ಭ್ರಷ್ಟಾಚಾರ ವಿರೋಧಿ ಕಾಯ್ದೆ ಇವರಿಗೆ ಅನ್ವಯಿಸುತ್ತದೆ. ಆದರೂ ತಾವು ಕಚೇರಿ ಕೆಲಸದಲ್ಲಿ ಭ್ರಷ್ಟಾಚಾರ ಎಸಗಿದ್ದರೆ ಮಾತ್ರ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಸಾಧ್ಯವೇ ಹೊರತು ಆಟದ ಬಯಲಲ್ಲಿ ಮಾಡಿರುವ ಅವ್ಯವಹಾರಗಳಿಗೆ ಶಾಸ್ತಿ ಮಾಡುವುದು ಸಾಧ್ಯವಿಲ್ಲ.
- ತಪ್ಪಿತಸ್ಥರೆನ್ನಲಾದ ಕ್ರಿಕೆಟಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಈಗಿರುವ ಒಂದೇ ದಾರಿಯೆಂದರೆ, ಅವರು ಅಕ್ರಮ ಆಸ್ತಿಗಳನ್ನು ಹೊಂದಿರುವುದು ಸಾಬೀತಾದಲ್ಲಿ ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಕ್ರಮ ಜರುಗಿಸುವುದು.
- ಬಿಸಿಸಿಐ ಒಂದು ಸ್ವಾಯತ್ತ ಸಂಸ್ಥೆಯಾದ್ದರಿಂದ ಕಾನೂನು ಸಚಿವಾಲಯ ಅದಕ್ಕೆ ಸಲಹೆ ನೀಡಬಹುದೇ ಹೊರತು ಆದೇಶ ಕೊಡಲು ಸಾಧ್ಯವಿಲ್ಲ. ಕಾನೂನು ಸಚಿವಾಲಯ ಆಟಗಾರರ ವಿರುದ್ಧ ಕ್ರಮ ಜರುಗಿಸಲು ಸಾಧ್ಯವಾಗದಿದ್ದರೂ ಕ್ರಿಕೆಟ್ ಮಂಡಳಿ ಶಿಸ್ತಿನ ಕ್ರಮ ಜರುಗಿಸಬಹುದಾಗಿದೆ.
- ಬುಕ್ಕಿಗಳೊಡನೆ ಆಟಗಾರರು ವ್ಯವಹರಿಸಿರುವುದಕ್ಕೆ ಪುರಾವೆಗಳು ಸಿಕ್ಕಿವೆಯಾದರೂ ಅವೂ ತೀರಾ ಬಲವಾಗಿಲ್ಲ. ಸಾಮರ್ಥ್ಯಕ್ಕಿಂತ ಕಡಿಮೆ ಆಟ ಆಡಿರುವುದನ್ನು ಸಾಬೀತು ಮಾಡಲು ಸಾಧ್ಯವೇ ಇಲ್ಲ.
- ಇಷ್ಟೆಲ್ಲಾ ಮಿತಿಗಳಿದ್ದರೂ ಕ್ರಿಕೆಟ್ ಮಂಡಳಿ ಸೂಕ್ತ ಶಿಕ್ಷೆ ವಿಧಿಸಬಹುದಾಗಿದೆ. ಶಿಸ್ತಿನ ಕ್ರಮ ಕೈಗೊಳ್ಳುವಲ್ಲಿ ಇರುವ ಈ ಎಲ್ಲಾ ತೊಡಕುಗಳನ್ನು ಗಮನದಲ್ಲಿಟ್ಟುಕೊಂಡೇ ಬಿಸಿಸಿಐನ ವಿಶೇಷ ಆಯುಕ್ತ ಮಾಧವನ್ ತನಿಖೆ ನಡೆಸಬೇಕಿದೆ. ಈಗ ಎಲ್ಲರ ನಿರೀಕ್ಷೆ ತಿಂಗಳಾಂತ್ಯದೊಳಗೆ ಸಿದ್ಧವಾಗಲಿರುವ ಅವರ ವರದಿಯ ಮೇಲಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications