ಪಾವಗಡ ತಾಲ್ಲೂಕಿಗೆ ಪೆನ್ನಾರ್ ನದಿ ನೀರು
ಬೆಂಗಳೂರು : ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಜನತೆಗೆ ಶಾಶ್ವತ ಕುಡಿಯುವ ನೀರನ್ನು ಒದಗಿಸುವ ಯೋಜನೆ ಮೂರು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಹೇಳಿದ್ದಾರೆ.
ಪೆನ್ನಾರ್ ನದಿ ನೀರನ್ನು ಒದಗಿಸುವ ಮೂಲಕ, ತಾಲ್ಲೂಕಿನ ಜನತೆಯ ಕುಡಿಯುವ ನೀರಿನ ಸಮಸ್ಯೆಯನ್ನು ಕೊನೆಗಾಣಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ವೆ ಕಾರ್ಯ ನಡೆದಿದ್ದು, ಎರಡು ಮೂರು ತಿಂಗಳಲ್ಲಿ ಯೋಜನೆಯನ್ನು ಜಾರಿಗೊಳಿಸಲು ಪ್ರಯತ್ನ ನಡೆಸಲಾಗುವುದು ಎಂದು ಚಿಮ್ಮನಕಟ್ಟಿ ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ. ಬಿಜೆಪಿಯ ಎ.ಎಚ್. ಶಿವಯೋಗ ಸ್ವಾಮಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡುತ್ತಿದ್ದರು.(ಇನ್ಫೋ ವಾರ್ತೆ)












Click it and Unblock the Notifications