ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ : ಬ್ಯಾಂಕಿಂಗ್ ಸೇವೆ ಕುಂಠಿತ
ನವದೆಹಲಿ: ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬ್ಯಾಂಕ್ ನೌಕರರು ರಾಷ್ಟ್ರೀಕೃತ ಬ್ಯಾಂಕ್ ನೀತಿಯ ತಿದ್ದುಪಡಿಯ ವಿರುದ್ಧ ಬುಧವಾರದಂದು ಮುಷ್ಕರ ಹೂಡಿರುವುದರಿಂದ ದೇಶಾದ್ಯಂತ ಬ್ಯಾಂಕ್ ವ್ಯವಹಾರಗಳು ಕುಂಠಿತವಾಗಿದ್ದವು.
ಸರಕಾರವು ಬ್ಯಾಂಕ್ ವಲಯದಲ್ಲಿ ಶೇ 51ಕ್ಕಿಂತ ಕಡಿಮೆ ಬಂಡವಾಳ ತೊಡಗಿಸಲು ನಿರ್ಧರಿಸುವುದನ್ನು ವಿರೋಧಿಸಿ ಬ್ಯಾಂಕ್ ನೌಕರರ ರಾಷ್ಟ್ರೀಯ ಸಂಘಟನೆ ಮುಷ್ಕರಕ್ಕೆ ಕರೆಕೊಟ್ಟಿತ್ತು. ಈ ಸಂದರ್ಭದಲ್ಲಿ ಹಣಕಾಸು ಸಚಿವ ಯಶವಂತ ಸಿನ್ಹಾ , ಸರಕಾರ ತನ್ನ ನಿರ್ಧಾದಲ್ಲಿ ಯಾವುದೇ ಬದಲಾವಣೆ ಮಾಡದು, ಈ ಕುರಿತ ತಿದ್ದು ಪಡಿಯನ್ನು ಸದನದಲ್ಲಿ ಮಂಡಿಸಲು ಈಗಾಗಲೇ ತೀರ್ಮಾನಿಸಲಾಗಿದೆ ಎಂದಿದ್ದಾರೆ. ಒಂದು ದಿನದ ಮುಷ್ಕರದಿಂದಾಗಿ ಸುಮಾರು ಒಂದು ಬಿಲಿಯನ್ ರೂಪಾಯಿ ನಷ್ಟ ವಾಗಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರಿನಲ್ಲಿ ಮುಷ್ಕರ : ಬೆಂಗಳೂರಿನಲ್ಲಿ ಹೆಚ್ಚಿನ ಬ್ಯಾಂಕ್ಗಳು ಮುಚ್ಚಿದ್ದವು. ಕೆಲವು ಬ್ಯಾಂಕ್ಗಳಲ್ಲಿ ಸ್ವಯಂ ನಿವೃತ್ತಿ ಪಡೆಯಲಿಚ್ಛಿಸಿದ ನೌಕರರು ಕೆಲಸಕ್ಕೆ ಹಾಜರಾಗಿದ್ದರು. ಆದರೆ ಶೇ. 75ರಷ್ಟು ಮಂದಿ ನೌಕರರು ಕೆಲಸಕ್ಕೆ ಹಾಜರಾಗಿರಲಿಲ್ಲ. ಆದ್ದರಿಂದ ಹೆಚ್ಚಿನ ಬ್ಯಾಂಕ್ಗಳಲ್ಲಿ ಗ್ರಾಹಕ ಸೇವೆ ಇರಲಿಲ್ಲ. ಕೆಲವು ಬ್ಯಾಂಕ್ಗಳಲ್ಲಿ ವಿದೇಶೀ ವಿನಿಮಯ ವಿಭಾಗವೂ ಸಂಪೂರ್ಣವಾಗಿ ಮುಚ್ಚಿದ್ದವು. ಆದರೆ ವಿದೇಶೀ ಮತ್ತು ಖಾಸಗೀ ಬ್ಯಾಂಕ್ಗಳ ವ್ಯವಹಾರದಲ್ಲಿ ಯಾವುದೇ ಬದಲಾವಣೆ ಇರಲಿಲ್ಲ. ಆದಾಗ್ಯೂ ಇಂಡಿಯನ್ ಬ್ಯಾಂಕ್ ಆಫೀಸರ್ಸ್ ಕಾಂಗ್ರೆಸ್ ಮತ್ತು ಶಿವಸೇನೆಯ ಬ್ಯಾಂಕ್ ಕರ್ಮಾಚಾರಿ ಸೇನಾ ಮಹಾ ಸಂಘ ಈ ಮುಷ್ಕರದಲ್ಲಿ ಭಾಗವಹಿಸಲಿಲ್ಲ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications