ಗಾಜನೂರಲ್ಲಿ ರಾಜ್ ವಿಶ್ರಾಂತಿ, ಗುರುವಾರ ಬೆಳಗ್ಗೆ ಬೆಂಗಳೂರಿಗೆ
ಬೆಂಗಳೂರು : ವೀರಪ್ಪನ್ ಒತ್ತೆಯಲ್ಲಿದ್ದ ರಾಜ್ಕುಮಾರ್ ಹಾಗೂ ನಾಗೇಶ್ ಅವರ ಬಿಡುಗಡೆಯಾಗಿದ್ದು, ಗುರುವಾರ ಮುಂಜಾನೆ ಹೊತ್ತಿಗೆ ಬೆಂಗಳೂರಿಗೆ ಬರುವ ನಿರೀಕ್ಷೆಯಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.
ದೊಡ್ಡಗಾಜನೂರಿನಲ್ಲಿ ಕೆಲವು ತಾಸುಗಳ ಕಾಲ ವಿರಮಿಸಿ, ಗುರುವಾರ ಮುಂಜಾನೆ ಹೊತ್ತಿಗೆ ಅವರು ಬೆಂಗಳೂರಿಗೆ ಬರಲಿದ್ದಾರೆ. ಅವರು ಬಂದ ನಂತರ ಪೂರ್ಣ ಪ್ರಮಾಣದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಹೇಳಿದರು.
ರಾಜ್ರ ಸ್ವಾಗತಕ್ಕೆ ಸಕಲ ಸಿದ್ಧತೆಗಳನ್ನೂ ನಡೆಸಲಾಗಿದ್ದು, ಈ ಕುರಿತು ರಾಜ್ ಕುಟುಂಬದೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದು ಕೃಷ್ಣ ಹೇಳಿದರು. ರಾಜ್ ಅಪಹರಣವಾದಾಗಿನಿಂದ ಈ ಹೊತ್ತಿನವರೆಗೆ ರಾಜ್ಯದಲ್ಲಿ ಶಾಂತಿ ಕಾಪಾಡಿಕೊಂಡು ಬಂದ ಜನತೆಗೆ ಮುಖ್ಯಮಂತ್ರಿಗಳು ಧನ್ಯವಾದ ಅರ್ಪಿಸಿದ್ದು, ರಾಜ್ ಅವರು ಬೆಂಗಳೂರಿಗೆ ಬಂದ ನಂತರವೂ ಇದೇ ರೀತಿ ಶಾಂತಿ ಕದಡದಂತೆ ವರ್ತಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ದೇಶಕ್ಕೇ ಮಾದರಿ : ರಾಜ್ ಅಪಹರಣವಾದ ದಿನದಿಂದಲೂ ರಾಜ್ಯ ಸರ್ಕಾರದೊಂದಿಗೆ ಎಲ್ಲಾ ಹಂತದಲ್ಲೂ ಸಹಕರಿಸಿ, ಸಲಹೆ ಸೂಚನೆಗಳನ್ನು ನೀಡಿದ ಪ್ರತಿಪಕ್ಷದ ನಾಯಕರ ನಡವಳಿಕೆ ದೇಶಕ್ಕೇ ಮಾದರಿಯಾಗಿದೆ ಎಂದು ಕೃಷ್ಣ ಸದನದಲ್ಲಿ ಧನ್ಯವಾದ ಅರ್ಪಿಸಿದರು. ಪ್ರತಿಪಕ್ಷಗಳ ಪರವಾಗಿ ಪಿ.ಜಿ.ಆರ್. ಸಿಂಧ್ಯಾ ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸಿದರು. ವಿಧಾನಪರಿಷತ್ತಿನಲ್ಲಿ ರಾಜ್ ಬಿಡುಗಡೆ ವಿಷಯವನ್ನು ಅಧಿಕೃತವಾಗಿ ಗೃಹಸಚಿವ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸಿದರು.
(ಯುಎನ್ಐ)
ವಾರ್ತಾ ಸಂಚಯ
ಮುಖಪುಟ / ರಾಜ್ ಅಪಹರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications