ಕಾಸರಗೋಡಿನಲ್ಲಿ ಕನ್ನಡಭವನ ನಿರ್ಮಾಣಕ್ಕೆ ನಿರ್ಧಾರ
ಕಾಸರಗೋಡು : ಮುಂದಿನ ಐದು ವರ್ಷದೊಳಗೆ ಕಾಸರಗೋಡಿನಲ್ಲಿ ಕನ್ನಡ ಭವನ ನಿರ್ಮಿಸಲು ಕೇರಳ ಪ್ರಾಂತದ ಕನ್ನಡ ಅಧ್ಯಾಪಕರ ಸಂಘ ನಿರ್ಧರಿಸಿದೆ.
ಇಲ್ಲಿನ ಜೆಯುಪಿ ಶಾಲೆಯಲ್ಲಿ ಬುಧವಾರ ನಡೆದ ಕೇರಳ ಪ್ರಾಂತ ಕನ್ನಡ ಅಧ್ಯಾಪಕರ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರೊ. ವಾಸುದೇವ ಚಾಪಡಿ ಇವರು ನೀಡಿದ 11 ಸಾವಿರ ರುಪಾಯಿಗಳ ದೇಣಿಗೆಯಲ್ಲಿ 10 ಸಾವಿರ ರುಪಾಯಿಗಳ ನಿಧಿ ಸ್ಥಾಪಿಸಲಾಗಿದೆ. ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿತು ಹೆಚ್ಚು ಅಂಕ ಪಡೆಯುವ ವಿಧ್ಯಾರ್ಥಿಗೆ ಕಾಸರಗೋಡು ಕನ್ನಡ ವಿದ್ಯಾರ್ಥಿ ಬಹುಮಾನ ನೀಡಲು ಸಭೆ ನಿರ್ಧರಿಸಿದೆ. ಬಹುಮಾನ ವಿತರಣೆ ಈ ವರ್ಷವೇ ಆರಂಭವಾಗಲಿದೆ.
ಕಾಸರಗೋಡು ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಿಗಾಗಿ ಬರುವ ವರ್ಷ ಕಮ್ಮಟ ಹಮ್ಮಿಕೊಳ್ಳಲು ತೀರ್ಮಾನಿಸಿದ ಸಭೆ, ಕನ್ನಡ ನೌಕರರ ಪ್ರಥಮ ಸಭೆಯ ಸಿದ್ಧತೆಗಾಗಿ ಎಸ್. ಕೆ. ಮೋಹನದಾಸ್ ಅವರ ನೇತೃತ್ವದಲ್ಲಿ ಸಮಿತಿ ನೇಮಿಸಿದೆ.
ಕಾಸರಗೋಡಿನ ಕನ್ನಡ ವಿದ್ಯಾರ್ಥಿಗಳ ಹೆಚ್ಚಿನ ಸವಲತ್ತುಗಳಿಗಾಗಿ ಕರ್ನಾಟಕದ ಮುಖ್ಯಮಂತ್ರಿ ಮತ್ತು ಇತರ ಸಚಿವರನ್ನು ಭೇಟಿ ಮಾಡಲು ಶಿಷ್ಟ ಮಂಡಳಿ ರಚನೆ, ಲೇಖಕ ಹಾಮಾನಾ ನಿಧನಕ್ಕೆ ಸಂತಾಪ ಸಲ್ಲಿಸಿದ ಸಭೆ, ಕಮ್ಮಟಕ್ಕಾಗಿ ಮತ್ತು ಇತರ ಕೆಲವು ಯೋಜನೆಗಳ ಉಪಸಮಿತಿಗಳನ್ನು ರಚಿಸಿತು.
ಪದಾಧಿಕಾರಿಗಳ ಆಯ್ಕೆ : ಕೇಂದ್ರ ಸಮಿತಿಗೆ ನಾಲ್ಕು ವರ್ಷಗಳ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಕಾಸರಗೋಡು ಸರಕಾರಿ ಕಲಾ ಕಾಲೇಜಿನ ಕೆ. ಕಮಲಾಕ್ಷ ಅವರನ್ನು ಗೌರವ ಅಧ್ಯಕ್ಷರನ್ನಾಗಿ, ಬೇಕೂರು ಜಿಎಚ್ಎಸ್ನ ಸಿ. ರಾಛವ ಬಲ್ಲಾಳ್ ಅವರನ್ನು ಅಧ್ಯಕ್ಷರನ್ನಾಗಿ, ಪೆರ್ಲ ಎಸ್ಎನ್ಎಚ್ಎಸ್ನ ವಿ.ಬಿ. ಕುಳಮರ್ವಾ ಅವರನ್ನು ಉಪಾಧ್ಯಕ್ಷರನ್ನಾಗಿ, ವೋಗ್ರಾಲ್ ಪುತ್ತೂರು ಶಾಲೆಯ ಒ. ಲೀಲಾವತಿ ಅವರು ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications