ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಉಡುಪಿ : ವಿಜಯೋತ್ಸವ, ದೇವಸ್ಥಾನಗಳಲ್ಲಿ ಪೂಜೆ
ಉಡುಪಿ : ವರನಟ ಡಾ. ರಾಜ್ ಅವರ ಬಿಡುಗಡೆಯ ಸಂಭ್ರಮವನ್ನು ಇಲ್ಲಿನ ರಾಜ್ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಆಚರಿಸಿದರು. ಅಭಿಮಾನಿಗಳ ಸಂಘದ ನೇತಾರ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಮಠದ ಯತಿಗಳು ಭಾಗವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಸಿಹಿ ಹಂಚಲಾಯಿತು. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ಸೇರಿದಂತೆ ರಂಗಭೂಮಿಯ ಹಿರಿಯ ನಟರು, ಜಿಲ್ಲೆಯ ಸಾಹಿತಿಗಳು ರಾಜ್ ಬಿಡುಗಡೆಗೆ ಅತೀವ ಹರ್ಷ ವ್ಯಕ್ತಪಡಿಸಿದ್ದಾರೆ.
(ಮಂಗಳೂರು ಪ್ರತಿನಿಧಿಯಿಂದ)
ವಾರ್ತಾ
ಸಂಚಯ
ಮುಖಪುಟ
/
ರಾಜ್
ಅಪಹರಣ
Story first published: Thursday, November 16, 2000, 5:30 [IST]