ರಾಜ್ ಬದಲಿಗೆ ನೂರಾರು ಕೋಟಿ ಹಣ, ಮಾರಣಾಯುಧ- ಜಯಲಲಿತಾ
ಚೆನ್ನೈ : ನರಹಂತಕನ ಕಪಿ ಮುಷ್ಟಿಯಿಂದ ರಾಜ್ಕುಮಾರ್ ಬಿಡುಗಡೆಯ ಬಗೆಗೆ ಸಂತೋಷ ವ್ಯಕ್ತ ಪಡಿಸಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕುಮಾರಿ ಜಯಲಲಿತಾ ಅವರು, ರಾಜ್ಕುಮಾರ್ ಬಿಡುಗಡೆಗಾಗಿ ಉಭಯ ಸರ್ಕಾರಗಳು ನೂರಾರು ಕೋಟಿ ರುಪಾಯಿ ಹಾಗೂ ಭಾರೀ ಪ್ರಮಾಣದ ಮಾರಕಾಯುಧ- ಸ್ಫೋಟಕಗಳನ್ನು ಕಳೆದ ಮೂರು ತಿಂಗಳಲ್ಲಿ ವೀರಪ್ಪನ್ಗೆ ರವಾನಿಸಿವೆ ಎಂದು ಆಪಾದಿಸಿದ್ದಾರೆ.
ಗುರುವಾರ ಚೆನ್ನೈನಲ್ಲಿ ಬಿಡುಗಡೆ ಮಾಡಿರುವ ಹೇಳಿಕೆಯಾಂದರಲ್ಲಿ , ವೀರಪ್ಪನ್ ವಿರುದ್ಧ ಕಾರ್ಯಾಚರಣೆ ನಡೆಸುವಲ್ಲಿ ರಾಜ್ಯ ಸರ್ಕಾರಗಳು ವಿಫಲವಾದಲ್ಲಿ , ಕೇಂದ್ರ ಸರ್ಕಾರವೇ ನರಹಂತಕನ ವಿರುದ್ಧ ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕಾಡುಗಳ್ಳನ ಅಟ್ಟಹಾಸವನ್ನು ಕೊನೆಗಾಣಿಸಲೇ ಬೇಕು ಎಂದು ಒತ್ತಿ ಹೇಳಿರುವ ಅವರು, ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಈ ಬಗ್ಗೆ ಪ್ರಯತ್ನಗಳನ್ನು ಮುಂದುವರಿಸುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ವೀರಪ್ಪನ್ನನ್ನು ಜೀವಂತ ಹಿಡಿಯಲು ಅಥವಾ ಕೊಲ್ಲಲು ರಾಜ್ಯವು ಸಮರ್ಥ ಪೊಲೀಸ್ ಅಧಿಕಾರಿಗಳ ವಿಶೇಷ ಕಾರ್ಯಪಡೆ ರಚಿಸಬೇಕು, ಈ ನಿಟ್ಟಿನಲ್ಲಿ ಐಜಿಪಿ ವಿಜಯ್ಕುಮಾರ್ ಅವರ ನೆರವನ್ನು ಪಡೆಯಬಹುದು ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ರಾಜ್ ಬಿಡುಗಡೆಯ ವಿಷಯವನ್ನು ತಮ್ಮ ರಾಜಕೀಯ ಸಾಧನೆಯನ್ನಾಗಿ ಬಳಸಿಕೊಳ್ಳದಂತೆ ಕರುಣಾನಿಧಿ ಅವರನ್ನು ಎಚ್ಚರಿಸಿರುವ ಜಯಲಲಿತಾ, ಇನ್ನು ಮುಂದಾದರೂ ವೀರಪ್ಪನ್ನ ಭಯೋತ್ಪಾದಕ ಚಟುವಟಿಕೆಗಳಿಗೆ ತಡೆ ಒಡ್ಡಲು ತಮ್ಮ ರಾಜಕೀಯ ಎದುರಾಳಿಗೆ ಬುದ್ಧಿವಾದ ಹೇಳಿದ್ದಾರೆ.
(ಯುಎನ್ಐ)
ಮುಖಪುಟ / ರಾಜ್ ಬಿಡುಗಡೆ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications