ಶಾಲು ಹೊದಿಸಿ, ನೆನಪಿನ ಕಾಣಿಕೆ ಇತ್ತು ಬೀಳ್ಕೊಟ್ಟ ವೀರಪ್ಪನ್
ಬೆಂಗಳೂರು : ವೀರಪ್ಪನ್ ಒಬ್ಬ ಕಾಡುಗಳ್ಳ, ದಂತ ಚೋರ, ನರಹಂತಕ ಆದರೂ 109 ದಿನಗಳ ಕಾಲ ಜನಮನ ಗೆದ್ದ ಕನ್ನಡದ ಮೇರು ನಟನೊಂದಿಗಿದ್ದು, ವೀರಪ್ಪನ್ ಸುಸಂಸ್ಕೃತನಂತಾಗಿದ್ದಾನೆ. ರಾಜ್ ಅವರನ್ನು ಬಿಡುಗಡೆ ಮಾಡುವ ಮುನ್ನ ಆತ ತನ್ನ ಸಹಚರರಾದ ಸೇತುಕುಳಿ ಮುಂತಾದವರ ಸಮ್ಮುಖದಲ್ಲಿ ಕನ್ನಡ ವರ ನಟನಿಗೆ ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಸತ್ಕರಿಸಿ ನಾಡಿಗೆ ಕಳುಹಿಸಿಕೊಟ್ಟಿದ್ದಾನೆ.
ಸಂಧಾನಕ್ಕಾಗಿ ತೆರಳಿದ್ದ ನೆಡುಮಾರನ್, ಪ್ರೊ. ಕಲ್ಯಾಣಿ ಇತರರ ಜತೆಯಲ್ಲಿ ತಾನೂ ನಿಂತು ರಾಜ್ಕುಮಾರ್ರೊಂದಿಗೆ ಅನೇಕ ಭಾವಚಿತ್ರಗಳನ್ನೂ ತೆಗೆಸಿಕೊಂಡಿದ್ದಾನೆ. ರಾಜ್ ಅವರು ಕಾಡಿನಲ್ಲಿ ಇರುವಷ್ಟು ದಿನವೂ ಅವರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಂಡಿದ್ದಾನೆ. ಸತ್ಸಂಗದಲ್ಲಿ ದಾನವನೂ ಮಾನವನಾಗಿದ್ದಾನೆ ಎನ್ನಬಹುದಲ್ಲವೇ..
ವಿಧಾನಸೌಧ ಪ್ರವೇಶ: ಕರ್ನಾಟಕ ಸರಕಾರದ ವಿಶೇಷ ಹೆಲಿಕಾಪ್ಟರ್ನಲ್ಲಿ ಕನ್ನಡ ಮಣ್ಣಿನಲ್ಲಿ ಬಂದಿಳಿದ ಕರ್ನಾಟಕ ರತ್ನ ರಾಜ್ಕುಮಾರ್ ಅವರು ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ವಿಮಾನ ನಿಲ್ದಾಣದಿಂದ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದರು. ಈಹೊತ್ತು ರಾಜ್ಕುಮಾರ್ ಅವರು ಕರ್ನಾಟಕದ ಹಿರಿಯ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದು, ಇನ್ನು ಕೆಲವೇ ಕ್ಷಣದಲ್ಲಿ ತಮ್ಮ 109 ದಿನಗಳ ವನವಾಸದ ಅನುಭವಗಳನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications