ದೀನ್ದಾರ್ ಚನ್ನಬಸವೇಶ್ವರ ಸಂಘಟನೆ ನಿಷೇಧಿಸಿ- ಸರ್ವಧರ್ಮ ಸಮ್ಮೇಳನ
ಬೆಂಗಳೂರು : ದೀನ್ದಾರ್ ಚನ್ನ ಬಸವೇಶ್ವರ ಸಂಘಟನೆಯನ್ನು ನಿಷೇಧಿಸಬೇಕೆಂದು ಸರ್ವ ಧರ್ಮಗಳ ಸಮ್ಮೇಳನ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಸಂಘಟನೆಯ ಸದಸ್ಯರು ಮುಸ್ಲಿಂ ಧರ್ಮಕ್ಕೆ ಸೇರಿದವರಲ್ಲ ಎಂದು ಸಮ್ಮೇಳನ ಅಭಿಪ್ರಾಯ ಪಟ್ಟಿತು.
ಧರ್ಮಗಳ ನಡುವೆ ಗೊಂದಲವನ್ನು ಸೃಷ್ಟಿಸಿ, ಹಿಂಸಾಚಾರ ನಡೆಸುತ್ತಿರುವ ಸಂಘಟನೆಯ ಕೃತ್ಯವನ್ನು ಸಭೆ ಒಮ್ಮತದಿಂದ ಖಂಡಿಸಿತು. ಜಮಾಯಿತ್ ಇ ಇಲಾಮ್ ಹಿಂದ್ ಸಂಘ ಶನಿವಾರ ಸರ್ವಧರ್ಮ ಸಮ್ಮೇಳನವನ್ನು ಏರ್ಪಡಿಸಿತ್ತು .
ಮುಸ್ಲಿಮರು ಶಾಂತಿ ಪ್ರಿಯರು. ಅವರಿಗೂ, ದೇಶದಲ್ಲಿ ವಿಷ ಬೀಜ ಬಿತ್ತುವ ಮೂಲಕ ಶಾಂತಿ ಕದಡಲು ಪ್ರಯತ್ನಿಸುತ್ತಿರುವ ದೀನ್ದಾರ್ ಸಂಘಟನೆಗೂ ಸಂಬಂಧವಿಲ್ಲ ಎಂದು ಸಮ್ಮೇಳನದಲ್ಲಿ ಮಾತನಾಡಿದ ಲೋಕಸಭಾ ಸದಸ್ಯ ಐ.ಜಿ. ಸನದಿ ಹೇಳಿದರು. ದೀನ್ದಾರ್ನ ಸ್ಥಾಪಕ ಸಿದ್ದಿಕ್ ದೀನ್ದಾರ್ ಅವರು, ವೀರಶೈವ ಮತ್ತು ಇಸ್ಲಾಂ ಧರ್ಮಗಳಿಗೆ ಮೋಸ ಮಾಡಿದ್ದಾರೆ. ಅವರು ತಾವೇ ಚನ್ನಬಸವೇಶ್ವರರ ಅವತಾರ ಅನ್ನುವ ಭ್ರಮೆಯನ್ನು ಹುಟ್ಟಿಸಿದರು ಹಾಗೂ ತಾವು ಪ್ರಚಾರ ಮಾಡಿದ ಖಾದಿಯಾನಿ ಧರ್ಮವನ್ನು ನಿಜವಾದ ಇಸ್ಲಾಂ ಎನ್ನುವ ತಪ್ಪು ಕಲ್ಪನೆಯನ್ನು ಮೂಡಿಸಲು ಪ್ರಯತ್ನಿಸಿದರು ಎಂದು ಆರೋಪಿಸಿದ ಸನದಿ, ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಬೇಕು ಎಂದರು.
ಸಮ್ಮೇಳನದಲ್ಲಿ ಮಾತನಾಡಿದ ಆದಿ ಚುಂಚನಗಿರಿ ಕ್ಷೇತ್ರದ ಬಾಲ ಗಂಗಾಧರನಾಥ ಸ್ವಾಮೀಜಿ ಧರ್ಮದ ಹೆಸರಿನಲ್ಲಿ ಅನೈತಿಕ ಕೆಲಸ ಮಾಡಬಾರದು. ಪ್ರೀತಿ, ವಿಶ್ವಾಸ ಹಂಚುವುದು ಧರ್ಮದ ಕೆಲಸವಾಗಬೇಕು ಎಂದರು. ಚರ್ಚ್ ಸ್ಫೋಟವನ್ನು ಬಲವಾಗಿ ಖಂಡಿಸಿದ ಸ್ವಾಮೀಜಿ, ಧರ್ಮಗಳ ನಡುವೆ ಒಡಕು ಉಂಟು ಮಾಡುತ್ತಿರುವ ಸಂಘಟನೆಯ ಕೃತ್ಯಗಳ ಬಗ್ಗೆ ವಿಷಾದಿಸಿದರು.
ವಸತಿ ಸಚಿವ ಕಮರುಲ್ ಇಸ್ಲಾಂ, ಸಂಸದ ಸಿ.ಕೆ. ಜಾಫರ್ ಷರೀಫ್, ಜೈನ ಮುನಿ ಕಮಲ್ ಮುನಿ ಮಹಾರಾಜ್, ಶಾಸಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮುಂತಾದವರು ಸಮ್ಮೇಳನದಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications