Get Updates
Get notified of breaking news, exclusive insights, and must-see stories!

ವೀರಪ್ಪನ್‌ ಕಾರ್ಯಾಚರಣೆ : ಸೋಮವಾರ ಪ್ರತಿಪಕ್ಷಗಳ ನಾಯಕರ ಸಭೆ

ಬೆಂಗಳೂರು : ವೀರಪ್ಪನ್‌ ವಿರುದ್ಧ ಕಾರ್ಯಾಚರಣೆ ನಡೆಸುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಸೋಮವಾರ ಸಂಜೆ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ಕರೆದಿದ್ದಾರೆ.

ವಿಧಾನಸೌಧದಲ್ಲಿ ಭಾನುವಾರ ನಡೆದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಈ ವಿಷಯವನ್ನು ತಿಳಿಸಿದರು. ಕಾರ್ಯಾಚರಣೆಯನ್ನು ಯಾವಾಗ ಪ್ರಾರಂಭಿಸಲಾಗುವುದು ಎನ್ನುವ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು, ಕಾರ್ಯಾಚರಣೆ ಕುರಿತ ವಿವರವಾದ ಹೇಳಿಕೆಯನ್ನು ಸದನದಲ್ಲಿ ಪ್ರಕಟಿಸುವುದಾಗಿ ಹೇಳಿದರು. ಕಾರ್ಯಾಚರಣೆಯಲ್ಲಿ ಕೇಂದ್ರದ ನೆರವನ್ನು ಕೋರುವ ವಿಷಯದ ಬಗ್ಗೆಯೂ ಸದನದಲ್ಲಿ ತಿಳಿಸುವುದಾಗಿ ಹೇಳಿದರು.

ರಾಜ್‌ ಆಸ್ಪತ್ರೆಯಿಂದ ಮನೆಗೆ : ಶನಿವಾರ ಮಲ್ಯ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಗಾದ ರಾಜ್‌ಕುಮಾರ್‌ ಅವರು ಅಂದೇ ಮನೆಗೆ ವಾಪಸ್ಸಾಗಿದ್ದಾರೆ. ಇಸಿಜಿ, ಎಕೋ ಹಾಗೂ ಸ್ಕ್ಯಾನಿಂಗ್‌ ಪರೀಕ್ಷೆಗೆ ಒಳಗಾದ ರಾಜ್‌ ಸಂಪೂರ್ಣ ಆರೋಗ್ಯವಾಗಿದ್ದಾರೆಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವನವಾಸದಿಂದ ರಾಜ್‌ ಅವರು ಸುಮಾರು ನಾಲ್ಕೂವರೆ ಕೆಜಿ ತೂಕ ಕಳೆದುಕೊಂಡಿದ್ದಾರೆ ಹಾಗೂ ಅವರ ಚರ್ಮ ಬಿಸಿಲಿಗೆ ಸುಟ್ಟು ಕಪ್ಪಗಾಗಿದೆ. ಎರಡು ಮೂರು ವಾರಗಳಲ್ಲಿ ಈ ತೊಂದರೆಗಳು ಪರಿಹಾರವಾಗುತ್ತವೆ ಎಂದು ವೈದ್ಯರು ಹೇಳಿದ್ದಾರೆ.

(ಯುಎನ್‌ಐ)

ವಾರ್ತಾ ಸಂಚಯ
ಮುಖಪುಟ / ರಾಜ್‌ ಬಿಡುಗಡೆ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+