ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ನಲ್ಲಿ ಮತ್ತೊಮ್ಮೆ ಮಾರಾಮಾರಿ
ಮಂಗಳೂರು : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಅಯ್ಕೆಯನ್ನು ಅಧಿಕೃತವಾಗಿ ಘೋಷಿಸದಿರುವುದರಿಂದ ಈಗಿನ ಅಧ್ಯಕ್ಷರನ್ನು ಮಾಜಿ ಅಧ್ಯಕ್ಷರೆಂದು ಕರೆಯಬಹುದೆ ಎಂಬ ವಿವಾದ ಮತ್ತೊಮ್ಮೆ ಮಾರಾಮಾರಿಗೆ ಕಾರಣವಾಗಿದೆ.
ಇಂದಿರಾಗಾಂಧಿ ಅವರ ಜನ್ಮದಿನಾಚರಣೆಗೆಂದು ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದಾಗ ಜಿಲ್ಲಾ ಕಾಂಗ್ರೆಸ್ನ ಉಪಾಧ್ಯಕ್ಷ ಇಬ್ರಾಹಿಂ ಕೋಡಿಚ್ಚಾಲ್ ಅವರು ಈಗಿನ ಅಧ್ಯಕ್ಷ ಎ. ಸಿ. ಬಂಡಾರಿಯವರನ್ನು ಮಾಜಿ ಅಧ್ಯಕ್ಷರೆ ಎಂದು ಸಂಬೋಧಿದರು. ಇದರಿಂದ ಕೆಲವರು ಆಕ್ಷೇಪ ಎತ್ತಿದರು. ಈ ಹಂತದಲ್ಲಿ ಮಾತಿಗೆ ಮಾತು ಬೆಳೆದು ಕುರ್ಚಿಗಳನ್ನೆತ್ತಿ ಹೊಡೆದಾಡುವ ಮಟ್ಟಕ್ಕೆ ಹೋಯಿತು. ಘಟನೆಯಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿದ ಪೋಲೀಸರು ಪರಿಸ್ಥಿತಿಯನ್ನು ತಹಬಂದಿಗೆ ತಂದರು. ಈ ಸಂಬಂಧ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Comments
Story first published: Monday, November 20, 2000, 5:30 [IST]