ಸ್ಯಾನಿಟರಿ ಬೇಸಿನ್ಗಳಲ್ಲಿ ಹಿಂದೂ ದೇವರ ಚಿತ್ರ: ಪ್ರತಿಭಟನೆ
ಬೆಂಗಳೂರು : ಹಿಂದೂ ದೇವರುಗಳ ಚಿತ್ರವುಳ್ಳ ಸ್ಯಾನಿಟರಿ ಬೇಸಿನ್ಗಳನ್ನು ಮಾರಾಟ ಮಾಡುತ್ತಿರುವ ಅಮೆರಿಕಾ ಕಂಪನಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸೋಮವಾರ ಸಾಯಂಕಾಲ ಬೆಂಗಳೂರಿನಲ್ಲಿ ಪ್ರತಿಭಟನೆ ಕಾರ್ಯಕ್ರಮ ನಡೆಯಲಿದೆ.
ಮಲಮೂತ್ರ ವಿಸರ್ಜಿಸುವ ಈ ಉಪಕರಣಗಳ ಮೇಲೆ ಗಣೇಶ, ದುರ್ಗೆ ಮುಂತಾದ ದೇವರುಗಳ ಚಿತ್ರವನ್ನು ಅಚ್ಚು ಹಾಕುವ ಮೂಲಕ ಹಿಂದೂ ಧರ್ಮೀಯರ ಭಾವನೆಗಳಿಗೆ ಈ ಸಂಸ್ಥೆ ಆಘಾತ ಉಂಟು ಮಾಡಿದೆ ಎಂದು ರಾಜ್ಯ ಯುವ ಜನತಾದಳದ ಸರ್ವಧರ್ಮ ಸಮನ್ವಯ ಸಮಿತಿ ಆರೋಪಿಸಿದೆ. ಕಂಪನಿಯ ಈ ಕ್ರಮವನ್ನು ಪ್ರತಿಭಟಿಸಲು ಹಾಗೂ ಈ ಕಂಪನಿಯ ವಿರುದ್ಧ ಸರಕಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ಬಸವನಗುಡಿ ರಸ್ತೆಯಲ್ಲಿರುವ ದೊಡ್ಡ ಗಣಪನ ಗುಡಿಯೆದುರು ಭೂತದಹನ ಕಾರ್ಯಕ್ರಮವನ್ನೂ ಹಮ್ಮಿಕೊಂಡಿದೆ.
ಈ ಸಂಬಂಧ ಹೇಳಿಕೆ ನೀಡಿರುವ ಸಮಿತಿಯ ಉಪಾಧ್ಯಕ್ಷ ಬಿ. ಗಣೇಶ್ ಅವರು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಮಾಡಿರುವ ಕಂಪನಿಯ ಅಧಿಕಾರಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಚಿವ ಜೀವರಾಜ ಆಳ್ವ, ಪಿ.ಜಿ.ಆರ್. ಸಿಂಧ್ಯಾ, ವಿ.ಎಸ್. ಕೃಷ್ಣ ಅಯ್ಯರ್, ಆರ್.ವಿ. ಹರೀಶ್ ಮೊದಲಾದವರು ಪಾಲ್ಗೊಳ್ಳುತ್ತಾರೆಂದೂ ಅವರು ತಿಳಿಸಿದ್ದಾರೆ.
ಸೋಮವಾರದಿಂದ ಬಸವನಗುಡಿಯಲ್ಲಿ ಕಡಲೇಕಾಯಿ ಪರಿಷೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಭಾರಿ ಜನಬೆಂಬಲ ವ್ಯಕ್ತವಾಗಲಿದೆ, ಪರಿಷೆಗೆ ಬರುವ ಪ್ರತಿಯಾಬ್ಬರೂ ತಮ್ಮೀ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುತ್ತಾರೆ ಎಂದೂ ಅವರು ಹೇಳಿದ್ದಾರೆ.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications