ಸತ್ಯಮಂಗಲ ಕಾಡಿನಲ್ಲಿ ಜಂಟಿ ಕಾರ್ಯಾಚರಣೆ ಪಡೆ
ಕೊಯಮತ್ತೂರು : ಎಚ್. ಟಿ. ಸಾಂಗ್ಲಿಯಾನ ನೇತೃತ್ವದ ಕರ್ನಾಟಕದ ವಿಶೇಷ ಕಾರ್ಯಾಚರಣೆ ಪಡೆ ಮತ್ತು ಬಾಲಚಂದ್ರನ್ ನೇತೃತ್ವದ ತಮಿಳುನಾಡಿನ ವಿಶೇಷ ಕಾರ್ಯಾಚರಣೆ ಪಡೆಗಳು ಸತ್ಯಮಂಗಲ ಕಾಡನಲ್ಲಿ ಕಾರ್ಯಾಚರಣೆಗೆ ಸಿದ್ಧತೆ ನಡೆಸಿವೆ.
ಜಂಟಿ ಕಾರ್ಯಾಚರಣೆ ಪಡೆಯನ್ನು ಏಳು ಗುಂಪುಗಳಾಗಿ ವಿಭಾಗಿಸಲಾಗಿದ್ದು, ತಮಿಳುನಾಡು ಕಾರ್ಯಾಚರಣೆ ಪಡೆಗೆ ನಾಲ್ಕು ಹೊಸ ಎಸ್ಪಿಗಳು ಸೇರ್ಪಡೆಯಾಗಿದ್ದಾರೆ. ಈ ಹಿಂದೆ ವೀರಪ್ಪನ್ ವಿರುದ್ಧ ನಡೆದ ಕಾರ್ಯಾಚರಣೆ ಸಂದರ್ಭದಲ್ಲಿ ಕೈ ಬೆರಳುಗಳನ್ನು ಕಳೆದುಕೊಂಡಿರುವ ತಮಿಳ್ ಸೆಲ್ವನ್, ಶೈಲೇಂದ್ರಬಾಬು, ಪೆರಿಯ ಅಯ್ಯ, ಅಶೋಕ್ ಕುಮಾರ್ ದಾಸ್ ಕಾರ್ಯಾಚರಣೆ ಪಡೆಯಲ್ಲಿ ಸೇರ್ಪಡೆಯಾಗಿರುವ ಹೊಸ ಮುಖಗಳಾಗಿದ್ದು, ಈ ನಾಲ್ಪರು ಹಿರಿಯ ಅಧಿಕಾರಿಗಳಿಗೂ ವೀರಪ್ಪನ್ ಜೋತೆ ಸೆಣಸಾಡಿದ ಅನುಭವವಿದೆ.
ಕೆಂಪನ್ ಬಂಧನ : ಈ ಹಿಂದೆ ಗೋಪಿಚೆಟ್ಟಿಪಾಳ್ಯಂನಲ್ಲಿ 1989ರಿಂದ 91ರವರೆಗೆ ಎಸಿಪಿಯಾಗಿ ಕಾರ್ಯ ನಿರ್ವಹಿಸಿದ್ದ ಶೈಲೇಂದ್ರಬಾಬು ಅವರು ಈಗ ಚೆನ್ನೈನ ಡಿಸಿಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಬಾರಿ ವೀರಪ್ಪನ್ ಅನ್ನು ಹಿಡಿದುಕೊಂಡೇ ನಾಡಿಗೆ ಬರುವುದಾಗಿ ಸಂದರ್ಶನವೊಂದರಲ್ಲಿ ವಿಶ್ವಾಸ ವ್ಯಕ್ತಪಡಿಸಿರುವ ಶೈಲೇಂದ್ರಬಾಬು, ಈ ಹಿಂದೆ ನಾಲ್ಕು ಬಾರಿ ವೀರಪ್ಪನ್ ಜೊತೆ ಮುಖಾಮುಖಿ ಸೆಣಸಾಡಿದ್ದಾರೆ. ಇಬ್ಬರು ಬಂಟರನ್ನು ಕೊಂದಿದ್ದಾರೆ. ಕೆಂಪನ್ ಎಂಬ ಇನ್ನೊಬ್ಬ ವೀರಪ್ಪನ್ ಸಹಚರ ಸೇರಿದಂತೆ 20 ಜನರನ್ನು ಬಂಧಿಸಿದ್ದಾರೆ.
ಜಯಲಲಿತಾ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾರ್ಯಾಚರಣೆ ಪಡೆಯಲ್ಲಿ ಇದ್ದ ತಮಿಳ್ ಸೆಲ್ವನ್ ಸಹ ತಮ್ಮ ಈಗಿನ ಕಾರ್ಯಾಚರಣೆ ಯಶಸ್ವಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಗತ್ಯಕ್ಕನುಗುಣವಾಗಿ ಇನ್ನೂ ಹೆಚ್ಚಿನ ಗುಂಪುಗಳನ್ನು ರಚಿಸುವ ಸಾಧ್ಯತೆ ಇದ್ದು, ಹೊಸಬರು ಮತ್ತು ಯುವಕರಿಗೆ ಆಧ್ಯತೆ ನೀಡಲು ಉದ್ದೇಶಿಸಲಾಗಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications