ಮೊದಲ ಟೆಸ್ಟ್ನಲ್ಲಿ ಭಾರತ ತಂಡಕ್ಕೆ 7 ವಿಕೆಟ್ಗಳ ಅರ್ಹ ಜಯ
ನವದೆಹಲಿ : ದೆಹಲಿಯಲ್ಲಿ ಬುಧವಾರ ಮುಕ್ತಾಯವಾದ ಜಿಂಬಾಬ್ವೆ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಜಯಗಳಿಸಿದೆ. ಗೆಲ್ಲಲು 190 ರನ್ ಗಳಿಸಬೇಕಾಗಿದ್ದ ಭಾರತ ತಂಡ, ಉದ್ದೇಶಿತ ಗುರಿಯನ್ನು 38 ಓವರ್ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಸಾಧಿಸಿತು.
ಮೊದಲ ಇನಿಂಗ್ಸ್ನಲ್ಲಿ ಅಜೇಯ ದ್ವಿ ಶತಕ ಗಳಿಸಿದ್ದ ರಾಹುಲ್ ದ್ರಾವಿಡ್ ಅವರು ಎರಡನೇ ಇನಿಂಗ್ಸ್ನಲ್ಲೂ ಮನಮೋಹಕ ಅಜೇಯ 70(91 ಚೆಂಡು, 8 ಬೌಂಡರಿ) ರನ್ಗಳನ್ನು ಗಳಿಸಿ ತಂಡದ ಗೆಲುವಿನ ರೂವಾರಿ ಎನಿಸಿದರು. ಟೆಸ್ಟ್ ಕ್ರಿಕೆಟ್ನಲ್ಲಿ ಮೊದಲ ಬಾರಿಗೆ ದ್ವಿಶತಕದ ಸಾಧನೆಗೈದ ಅವರಿಗೆ 25 ಸಾವಿರ ರುಪಾಯಿಗಳ ವಿಶೇಷ ಬಹುಮಾನ ನೀಡಲಾಯಿತು. ಉತ್ತಮ ಆಟ ಪ್ರದರ್ಶಿಸಿದ ನಾಯಕ ಗಂಗೂಲಿ 65 (90 ಚೆಂಡು, 5 ಬೌಂಡರಿ, 3 ಸಿಕ್ಸರ್) ರನ್ ಗಳಿಸಿ ಔಟಾಗದೆ ಉಳಿದರು.
ಪಂದ್ಯದ ಪುರುಷೋತ್ತಮ ಪ್ರಶಸ್ತಿ ವೇಗಿ ಜಾವಗಲ್ ಶ್ರೀನಾಥ್ ಅವರ ಪಾಲಾಯಿತು. ಎರಡನೆ ಇನಿಂಗ್ಸ್ನಲ್ಲಿ ತಮ್ಮ ಅಮೋಘ ಬೌಲಿಂಗ್ ಮೂಲಕ ಜಿಂಬಾಬ್ವೆ ಬ್ಯಾಟಿಂಗ್ ಬೆನ್ನೆಲುಬು ಮುರಿದು 5 ವಿಕೆಟ್ ಗಳಿಸಿದ ಶ್ರೀನಾಥ್ ಹೋರಾಟಕ್ಕೆ ವೇದಿಕೆ ಅಣಿ ಪಡಿಸಿದ್ದರು.
ಸ್ಕೋರ್ ವಿವರ : ಜಿಂಬಾಬ್ವೆ- ಮೊದಲ ಇನಿಂಗ್ಸ್ 9 ವಿಕೆಟ್ಗೆ 422 (ಡಿಕ್ಲೇರ್), ಎರಡನೇ ಇನಿಂಗ್ಸ್ 225.
ಭಾರತ- ಮೊದಲ ಇನಿಂಗ್ಸ್ 4 ವಿಕೆಟ್ಗೆ 458(ಡಿಕ್ಲೇರ್), ಎರಡನೇ ಇನಿಂಗ್ಸ್ 3 ವಿಕೆಟ್ಗೆ 190.
ಕಾನ್ಪುರ್ ಟೆಸ್ಟ್ಗೆ ತಂಡ ಪ್ರಕಟ : ಯುವರಾಜ್ ಬದಲಿಗೆ ಕೈಫ್
ಉತ್ತರ ಪ್ರದೇಶದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಮೊಹಮದ್ ಕೈಫ್ ನ.25 ರಿಂದ ಕಾನ್ಪುರದಲ್ಲಿ ಪ್ರಾರಂಭವಾಗುವ ಜಿಂಬಾಬ್ವೆ ವಿರುದ್ಧದ ಎರಡನೆ ಟೆಸ್ಟ್ಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಗಿಟ್ಟಿಸಿದ್ದಾರೆ.
ಚಂದು ಬೋರ್ಡೆ ಅವರ ಅಧ್ಯಕ್ಷತೆಯಲ್ಲಿ ಬುಧವಾರ ದೆಹಲಿಯಲ್ಲಿ ಸಭೆ ಸೇರಿದ ರಾಷ್ಟ್ರೀಯ ಆಯ್ಕೆದಾರರು ಮೊದಲ ಟೆಸ್ಟ್ನಲ್ಲಿ ಆಡಿದ ತಂಡದಲ್ಲಿ ತಂದದ್ದು ಏಕಮಾತ್ರ ಪರಿವರ್ತನೆಯನ್ನು. ಕೈಫ್ ಅವರನ್ನು ಆಯ್ಕೆ ಮಾಡಿದ ಆಯ್ಕೆದಾರರ ತಂಡ, ಆಲ್ರೌಂಡರ್ ಯುವರಾಜ್ ಸಿಂಗ್ ಅವರನ್ನು ತಂಡದಿಂದ ಕೈ ಬಿಟ್ಟಿತು. ಸಾಕಷ್ಟು ಚರ್ಚೆಯ ನಂತರ ತಂಡವನ್ನು ಆಯಲಾಗಿದೆ ಎಂದು ಬೋರ್ಡೆ ಸುದ್ದಿಗಾರರಿಗೆ ತಿಳಿಸಿದರು.
ತಂಡ ಇಂತಿದೆ : ಸೌರವ್ ಗಂಗೂಲಿ (ನಾಯಕ), ಶಿವ್ ಸುಂದರ್ ದಾಸ್, ಶಡಗೋಪನ್ ರಮೇಶ್, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವಿಜಯ್ ದಾಹಿಯ (ವಿಕೆಟ್ ಕೀಪರ್), ಸುನಿಲ್ ಜೋಶಿ, ಜಾವಗಲ್ ಶ್ರೀನಾಥ್, ಮುರಳಿ ಕಾರ್ತೀಕ್, ಅಜಿತ್ ಅಗರ್ಕರ್, ವಿವಿಎಸ್ ಲಕ್ಷ್ಮಣ್ ಮತ್ತು ಮೊಹಮದ್ ಕೈಫ್.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications