ಶಾಲೆಗಳಲ್ಲಿ ಹೆಚ್ಚು ಹೆಚ್ಚು ಶಿಕ್ಷಕಿಯರ ನೇಮಕಕ್ಕೆ ಕರೆ
ಕೆ.ಆರ್. ನಗರ: ಪ್ರಾಥಮಿಕ ಶಾಲೆಗಳಲ್ಲಿ ಹೆಚ್ಚಾಗಿ ಶಿಕ್ಷಕಿಯರನ್ನೇ ನೇಮಕ ಮಾಡಿದರೆ, ಪ್ರಾಥಮಿಕ ಶಿಕ್ಷಣ ಅಭಿವೃದ್ಧಿ ಹೊಂದುತ್ತದೆ ಎಂದು ರಾಜ್ಯಪಾಲರಾದ ವಿ.ಎಸ್. ರಮಾದೇವಿ ಅಭಿಪ್ರಾಯಪಟ್ಟಿದ್ದಾರೆ. ದೇಶ ಸ್ವಾತಂತ್ರ್ಯ ಪಡೆದು 50 ವರ್ಷಗಳೇ ಕಳೆದಿದ್ದರೂ ಕೂಡ ಮಹಿಳೆ ದೇಶದ ಅಭಿವೃದ್ಧಿಗೆ ತೊಡಗಿಕೊಳ್ಳಲು ಸಾಧ್ಯವಾಗಿಲ್ಲ ಎಂದು ವಿಷಾದಿಸಿದರು.
ಜನರೇ ಆಯ್ಕೆ ಮಾಡಿದ ಜನಮೆಚ್ಚಿದ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು. ಮಹಿಳೆಗೆ ಸಾಮಾಜಿಕ ನ್ಯಾಯ ದೊರಕಬೇಕು. ಪುರುಷರಷ್ಟೇ ಸರಿಸಮನಾಗಿ ಮಹಿಳೆಯ ದೇಶದ ಅಭಿವೃದ್ಧಿಯ ಪಥದಲ್ಲಿ ಹೆಜ್ಜೆ ಹಾಕಲು ಪುರುಷ ಸಮಾಜ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
ಸರಕಾರದಿಂದಲೇ ಪ್ರಶಸಿ್ತ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಅವರು ಮಾತನಾಡಿ ಮುಂದಿನ ವರ್ಷದಿಂದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯಾದ್ಯಂತ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನಮೆಚ್ಚಿದ ಶಿಕ್ಷಕ ಪ್ರಶಸ್ತಿ ನೀಡಲಾಗುವುದು ಎಂದು ಹೇಳಿದರು.
ಶಾಲಾ ಶಿಕ್ಷಕರನ್ನು ರಾಜ್ಯ ಸರ್ಕಾರವು ಕೇಲವ ಸರ್ಕಾರಿ ನೌಕರರೆಂದು ತಿಳಿದಿಲ್ಲ. ಶಿಕ್ಷಕರನ್ನು ನಾಡಿನ ಗುರುಗಳು ಎಂದು ಪೂಜ್ಯ ಭಾವದಿಂದ ಕಾಣಲಾಗುತ್ತಿದೆ, ಶಿಕ್ಷಕರೂ ಇದನ್ನು ಅರಿತು, ತಮ್ಮ ವೃತ್ತಿಯ ಘನತೆಯನ್ನು ಕಾಪಾಡಿಕೊಂಡು, ಉತ್ತಮ ಪ್ರಜೆಗಳನ್ನು ನಾಡಿಗೆ ನೀಡಬೇಕೆಂದರು. ಪ್ರಾಯೋಗಿಕವಾಗಿ ನಡೆದ ಈ ಸಮಾರಂಭದಲ್ಲಿ ಜನರು ಹಾಗೂ ವಿದ್ಯಾರ್ಥಿಗಳ ಪಾಲಕರೇ ಆಯ್ಕೆ ಮಾಡಿದ್ದ 40 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ವಿತರಿಸಲಾಯಿತು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications