ಮಹಿಳೆಯರಿಗೆ ಸಾಲ ನೀಡಿಕೆ ಪ್ರಮಾಣ ಹೆಚ್ಚಿಸಲು ಸಿನ್ಹಾ ನಿರ್ದೇಶನ
ನವದೆಹಲಿ : ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ದೃಷ್ಟಿಯಿಂದ ಸಾರ್ವಜನಿಕ ವಲಯದ ಬ್ಯಾಂಕುಗಳು ತಮ್ಮ ಸಾಲ ನೀಡಿಕೆ ಪ್ರಮಾಣದಲ್ಲಿ ಶೇಕಡಾ ಎರಡರಷ್ಟನ್ನು ಮಹಿಳೆಯರಿಗೆ ಮೀಸಲಿಡಬೇಕೆಂದು ಕೇಂದ್ರ ಹಣಕಾಸು ಸಚಿವ ಯಶವಂತ ಸಿನ್ಹಾ ನಿರ್ದೇಶನ ನೀಡಿದ್ದಾರೆ.
ಈ ಸಂಬಂಧ ಗುರುವಾರ ಹೇಳಿಕೆ ನೀಡಿರುವ ಸಿನ್ಹಾ ಅವರು ಸಾಲ ನೀಡಿಕೆ ಪ್ರಮಾಣವನ್ನು ಮುಂದಿನ ಐದು ವರ್ಷಗಳಲ್ಲಿ ಶೇಕಡಾ ಐದಕ್ಕೆ ಏರಿಸುವಂತೆಯೂ ಸೂಚಿಸಿದ್ದಾರೆ. ಬ್ಯಾಂಕುಗಳಿಂದ ಹಣಕಾಸು ನೆರವನ್ನು ಸುಲಭವಾಗಿ ತೆಗೆದುಕೊಳ್ಳಲು ಮಹಿಳೆಯರಿಗೆ ಅನುಕೂಲವಾಗುವಂತೆ ಇತರ ಕೆಲವು ಕ್ರಮಗಳನ್ನು ಕೈಗೊಳ್ಳುವುದು. 14 ಅಂಶಗಳ ಕಾರ್ಯಕ್ರಮದಡಿ ಈಗಿನ ನಿಯಮಗಳನ್ನು ಸರಳಗೊಳಿಸುವುದು. ಇತ್ತೀಚಿನ ಸೌಲಭ್ಯಗಳು ಮತ್ತು ಇತರ ಪೂರಕ ಮಾಹಿತಿಗಳನ್ನು ಒದಗಿಸಲು ಬ್ಯಾಂಕ್ಗಳು ಕ್ರಮ ಕೈಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಲಹಾ ಕೇಂದ್ರಗಳ ಸ್ಥಾಪನೆ : ಮಹಿಳಾ ಉದ್ಯಮಿಗಳ ಸಮಸ್ಯೆಗಳ ಪರಿಹಾರ ಮತ್ತು ಇತರ ಅಗತ್ಯಗಳನ್ನು ಪೂರೈಸಲು ಮಹಿಳೆಯರಿಗಾಗಿ ಪ್ರತ್ಯೇಕ ಶಾಖಾ ಬ್ಯಾಂಕ್ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿಲಾಗಿದೆ. ರಾಷ್ಟ್ರಾದ್ಯಂತ ಪ್ರತಿ ಜಿಲ್ಲೆಯಲ್ಲಿ ಇಂತದೊಂದು ಕೇಂದ್ರವನ್ನು ತೆರೆಯಲು ಕ್ರಮ ತೆಗೆದುಕೊಳ್ಳಲಾಗುವುದು. ಈ ಕೆಂದ್ರಗಳು ಮಹಿಳೆಯರ ಸಾಲ ಸಂಬಂಧಿತ ಸಮಸ್ಯೆಗಳನ್ನು ನಿಭಾಯಿಸಲಿದ್ದು ಸಲಹಾ ಕೇಂದ್ರಗಳಂತೆ ಕೆಲಸ ಮಾಡಲಿವೆ.
ಬ್ಯಾಂಕ್ಗಳ ಈಗಿನ ನಿಯಮಗಳಲ್ಲಿ ಬದಲಾವಣೆ ಮಾಡಿ ಪ್ರತಿ ಬ್ಯಾಂಕ್ಗಳಲ್ಲಿ ಮಹಿಳೆಯರಿಗಾಗಿಯೇ ಸಲಹೆ ನೀಡುವ ಪ್ರತ್ಯೇಕ ಕೌಂಟರ್ ಸ್ಥಾಪಿಸುವಂತೆ ನಿರ್ದೇಶನ ನೀಡಲಾಗಿದೆ. ಈ ಎಲ್ಲ ಕ್ರಮಗಳಿಂದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಹಾಯ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications