ಟಾಡಾ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ
ಬೆಂಗಳೂರು : ಟಾಡಾ ಪ್ರಕರಣಗಳ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪನೆ ಆಗಿದೆ. ಈ ಸಂಬಂಧ ಶುಕ್ರವಾರ ಅಧಿಕೃತ ಆದೇಶ ಹೊರಬಿದ್ದಿದೆ. ಹೈಕೋರ್ಟ್ನ ರಿಜಿಸ್ಟ್ರಾರ್ ಅವರು ಈ ಆದೇಶ ಹೊರಡಿಸಿದ್ದಾರೆ. ಮೈಸೂರು ಸೆರೆಮನೆಯಲ್ಲಿರುವ ಟಾಡಾ ಬಂದಿಗಳ ಸಂಬಂಧದ ವಿಚಾರಣೆಯನ್ನು ಈವರೆಗೆ ನ್ಯಾಯಮೂರ್ತಿಗಳಾದ ರಾಜೇಂದ್ರ ಪ್ರಸಾದ್ ನಡೆಸುತ್ತಿದ್ದರು.
ಕಾರ್ಯಾಚರಣೆಗೆ ಮಳೆ ಅಡ್ಡಿ : (ಮೈಸೂರು ವರದಿ) ಚಳಿಗಾಲ ಸುರಿಸುತ್ತಿರುವ ಎಡೆಬಿಡದ ತುಂತುರು, ಇಬ್ಬನಿ ವೀರಪ್ಪನ್ ವಿರುದ್ಧದ ಕರ್ನಾಟಕ ಹಾಗೂ ತಮಿಳುನಾಡಿನ ಜಂಟಿ ಎಸ್ಟಿಎಫ್ ಕಾರ್ಯಾಚರಣೆಗೆ ದೊಡ್ಡ ಅಡ್ಡಿಯಾಗಿ ಪರಿಣಮಿಸಿದೆ.
ಇಂಥ ಪ್ರತಿಕೂಲ ಪರಿಸ್ಥಿತಿಯಲ್ಲೂ ತಮಿಳುನಾಡಿನ ತುಕಡಿಗಳು ದಿಂಬಂ, ಹಂದಿಯೂರು ಹಾಗೂ ಹಾಸನೂರು ಮೂಲಕ ಕಾಡ ಹೊಕ್ಕಿದ್ದು, ವೀರಪ್ಪನ್ ತಲಾಶೆಯಲ್ಲಿವೆ. ಕರ್ನಾಟಕ ಎಸ್ಟಿಎಫ್ ಮುಖ್ಯಸ್ಥ ಎಚ್.ಟಿ.ಸಾಂಗ್ಲಿಯಾನ ಕಾಡಿನ ನಕಾಶೆಯನ್ನು ಮನಸ್ಸಿಗೆ ತುಂಬಿಕೊಂಡಿದ್ದಾರೆ. ಎಲ್ಲ ಅಧಿಕಾರಿಗಳ ಜೊತೆ ಚರ್ಚಿಸಿ, ಪೂರ್ಣ ಪ್ರಮಾಣದ ಶಿಸ್ತುಬದ್ಧ ಕಾರ್ಯಾಚರಣೆಯನ್ನು ಆದಷ್ಟು ಬೇಗ ಪ್ರಾರಂಭಿಸಲಿದ್ದಾರೆ. ಆಯಕಟ್ಟಿನ ಜಾಗೆಗಳಲ್ಲಿ ಕರ್ನಾಟಕದ ತುಕಡಿಗಳು ನಿಗಾ ಇಟ್ಟಿವೆ.
ಕಮಾಂಡೋ ನೆರವು ಯಾಚನೆ : ಎಸ್ಟಿಎಫ್ಗೆ ಸಹಕಾರ ನೀಡಲು ರಾಷ್ಟ್ರೀಯ ಸುರಕ್ಷಣಾ ದಳ(ಎನ್ಎಸ್ಜಿ)ದ ಕಮಾಂಡೋ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಈಗಾಗಲೇ ಪತ್ರ ಬರೆದಿದ್ದಾರೆ. ಕರ್ನಾಟಕದ ನಿಯೋಗ ಶುಕ್ರವಾರ ಕೇಂದ್ರ ಗೃಹ ಸಚಿವ ಮತ್ತು ರಕ್ಷಣಾ ಸಚಿವರನ್ನು ಭೇಟಿ ಮಾಡಿ, ವೀರಪ್ಪನ್ ಬಂಧನಕ್ಕೆ ಕೇಂದ್ರದ ನೆರವನ್ನು ಕೋರಿದ್ದಾರೆ.
ಶರಣಾಗತಿ ಬಗ್ಗೆ ಯೋಚಿಸಿಲ್ಲ : ವೀರಪ್ಪನ್ ಶರಣಾಗತಿ ಬಗ್ಗೆ ಮಾಧ್ಯಮದವರಿಂದ ಒಂದೇ ಸಮನೆ ಎರಗುತ್ತಿರುವ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಕೃಷ್ಣ ಮುಗುಮ್ಮಾಗಿ ಉತ್ತರಿಸಿದ್ದಾರೆ. ಇದು ಹೊಸ ಆಲೋಚನೆ. ಇದರ ಬಗ್ಗೆ ನಾನು ಯೋಚಿಸಿಯೇ ಇಲ್ಲ. ಈ ವಿಷಯದ ಬಗ್ಗೆ ಚಿಂತನೆ, ಅಧ್ಯಯನ ನಡೆಸುವವರೆಗೆ ಏನೂ ಹೇಳಲಾರೆ ಎಂದಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವೀರಪ್ಪನ್ ಶಿಕಾರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications