ಮೈಸೂರು: 51 ಟಾಡಾ ಕೈದಿಗಳ ಜತೆ ನೆಡುಮಾರನ್ ಮಾತುಕತೆ
ಮೈಸೂರು : ರಾಜ್ಕುಮಾರ್ ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ ನೆಡುಮಾರನ್ ತಮ್ಮ ಸಂಧಾನದ ಗೆಳೆಯರಾದ ಕೊಳತ್ತೂರು ಮಣಿ, ಪ್ರೊ. ಕಲ್ಯಾಣಿ, ಸುಕುಮಾರನ್ ಅವರೊಡಗೂಡಿ ಮೈಸೂರು ಕೇಂದ್ರ ಕಾರಾಗೃಹದಲ್ಲಿರುವ ಟಾಡಾ ಬಂದಿಗಳನ್ನು ಭೇಟಿ ಮಾಡಿ ಅವರ ಕಷ್ಟ ಸುಖ ವಿಚಾರಿಸಿದರು.
ನಾಳೆ ಗಡಿ ಭಾಗವಾದ ಕೊಳತ್ತೂರಿನಲ್ಲಿ ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯ ವಿರುದ್ಧ ತಮಿಳು ಸಂಘಟನೆಗಳು ನಡೆಸುತ್ತಿರುವ ಆಂದೋಲನದಲ್ಲಿ ಪಾಲ್ಗೊಳ್ಳಲು ತೆರಳುವ ಮಾರ್ಗದಲ್ಲಿ ನಿಗದಿತ ಕಾರ್ಯಕ್ರಮದಂತೆ ಮೈಸೂರಿಗೆ ಭೇಟಿ ನೀಡಿದ್ದ ನೆಡುಮಾರನ್ ಈ ಹಿಂದೆ ಎಸ್ಟಿಎಫ್ ಸಿಬ್ಬಂದಿ ಅಮಾಯಕರ ಮೇಲೆ ನಡೆಸಿರುವ ದೌರ್ಜನ್ಯದ ವಿರುದ್ಧ ಇನ್ನೊಂದು ಆಯೋಗ ರಚಿಸಿ ತನಿಖೆ ನಡೆಸಬೇಕು ಎಂದು ಅಭಿಪ್ರಾಯಪಟ್ಟರು.
ಹಣ ಸಂದಾಯ ಆಗಿಲ್ಲ: ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಅವರು, ರಾಜ್ ಬಿಡುಗಡೆ ಪ್ರಕ್ರಿಯೆಯಲ್ಲಿ ಯಾವುದೇ ಹಣ ಸಂದಾಯ ಆಗಿಲ್ಲ, ತಾವು ಯಾವುದೇ ಅವ್ಯವಹಾರದಲ್ಲಿ ಪಾಲ್ಗೊಂಡಿಲ್ಲ ಎಂದರಲ್ಲದೆ, ಶ್ರೀಲಂಕಾದ ಎಲ್ಟಿಟಿಈ ಪಡೆಗೂ ವೀರಪ್ಪನ್ಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಕುಮಾರ್ ಅವರನ್ನು ಬಿಡುಗಡೆ ಮಾಡುವಂತೆ ಎಲ್ಟಿಟಿಈ ನಾಯಕ ಪ್ರಭಾಕರನ್ ಅವರೇ ನಿರ್ದೇಶಿಸಿದ್ದರಂತೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ ಈ ಸಂದೇಹಾತ್ಮಕ ವರದಿಗಳಿಗೆ ನಾನು ಉತ್ತರಿಸುವುದಿಲ್ಲ ಎಂದರು.
ವೀರಪ್ಪನ್ ಪತ್ತೆಗೆ ಉಪಗ್ರಹ ನೆರವು: ಸೇನೆ ಬಳಸುವ ಅತ್ಯಾಧುನಿಕ ಉಪಕರಣದ ನೆರವಿನಿಂದ ವೀರಪ್ಪನ್ ಬೇಟೆಗೆ ರಾಜ್ಯ ಸರಕಾರ ನಿರ್ಧರಿಸಿದೆ. ಉಪಗ್ರಹ ನೆರವಿನಿಂದ ವೀರಪ್ಪನ್ ಅಡಗುತಾಣವನ್ನು ಪತ್ತೆ ಹಚ್ಚುವ ಯಂತ್ರವನ್ನು ಕೇಂದ್ರದಿಂದ ಪಡೆದು ವಿಶೇಷ ಕಾರ್ಯಪಡೆಗೆ ನೀಡಲಾಗುತ್ತದೆ. ಮಿಗಿಲಾಗಿ ಸಾಂಗ್ಲಿಯಾನರ ಕೋರಿಕೆಯಂತೆ ವಿಶೇಷ ಪಡೆಗೆ ಮತ್ತಷ್ಟು ಸಿಬ್ಬಂದಿಯನ್ನು ನೀಡಲು ಸರಕಾರ ತೀರ್ಮಾನಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮುಖಪುಟ / ವೀರಪ್ಪನ್ ಶಿಕಾರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications