ತುಮಕೂರು: ರೈಲಿನಲ್ಲೊಂದು ರಾಜ್ಯೋತ್ಸವ ಕಾರ್ಯಕ್ರಮ
ತುಮಕೂರು : ಇವರು ನಿತ್ಯ ತುಮಕೂರಿನಿಂದ - ಬೆಂಗಳೂರು - ತುಮಕೂರು ನಡುವೆ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರು. ಸರ್ಕಾರಿ, ಖಾಸಗಿ ಕಂಪನಿಗಳ ಉದ್ಯೋಗಿಗಳು. ತಮ್ಮ ಬದುಕಿನ ಜಂಜಾಟದ ನಡುವೆಯೂ ಇವರಲ್ಲಿ ಕನ್ನಡ ಪ್ರೇಮ ಹೊರಹೊಮ್ಮುತ್ತಿತ್ತು. ನಾಡಹಬ್ಬ ರಾಜ್ಯೋತ್ಸವವನ್ನು ಆಚರಿಸುವ ತವಕ. ಅವಕಾಶ ಇರಲಿಲ್ಲ. ಕೊನೆಗೊಂದು ಉಪಾಯ ಹೊಳೆಯಿತು. ತಾವು ನಿತ್ಯ ಓಡಾಡುವ ರೈಲಿನಲ್ಲೇ ರಾಜ್ಯೋತ್ಸವ ಆಚರಿಸಲು ಇವರು ನಿರ್ಧರಿಸಿದರು.
ಶನಿವಾರ ಬೆಳಗ್ಗೆ ರೈಲು ತುಮಕೂರು ಬಿಡುವ ಮುನ್ನ ತಾವು ನಿತ್ಯ ಸಂಚರಿಸುವ ಹತ್ತು ಬೋಗಿಗಳಿಗೆ ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕುವೆಂಪು, ದ.ರಾ.ಬೇಂದ್ರೆ, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ.ಕೃ. ಗೋಕಾಕ್, ಅನಂತಮೂರ್ತಿ, ಗಿರೀಶ್ ಕಾರ್ನಾಡ್ ಹಾಗೂ ಜಿಲ್ಲೆಯ ಸಾಹಿತಿಗಳಾದ ಕನ್ನಡದ ಕಣ್ವ ಬಿ.ಎಂ. ಶ್ರೀಕಂಠಯ್ಯ, ತೀ.ನಂ. ಶ್ರೀಕಂಠಯ್ಯ ಹಾಗೂ ಜಿ.ಎಸ್. ಸಿದ್ಧಲಿಂಗಯ್ಯ ಅವರ ಹೆಸರುಗಳನ್ನು ಈ ಬೋಗಿಗಳಿಗಿಟ್ಟರು. ತಳಿರು ತೋರಣಗಳಿಂದ ಈ ಬೋಗಿಗಳನ್ನು ಅಲಂಕರಿಸಿದರು.
ರೈಲು ತುಮಕೂರು ನಿಲ್ದಾಣ ಬಿಡುತ್ತಿದ್ದಂತೆ ರೈಲಿನಲ್ಲೇ ರಾಜ್ಯೋತ್ಸವ ಕಾರ್ಯಕ್ರಮ ಆರಂಭವಾಯಿತು. ಕುವೆಂಪು ಹೆಸರಿನ ಬೋಗಿಯಲ್ಲಿ ಕಾರ್ಯಕ್ರಮದ ಉದ್ಘಾಟನೆ. ರೈಲ್ವೆ ಪ್ರಯಾಣಿಕರ ವೇದಿಕೆ ಆಯೋಜಿಸಿದ್ದ ಈ ಕಾರ್ಯಕ್ರಮವನ್ನು ಬೆಂಗಳೂರು ಮಂಡಲ ವಾಣಿಜ್ಯ ವ್ಯವಸ್ಥಾಪಕ ಎಸ್. ಗಗರಿನ್ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತಾಯಿ ಭುವನೇಶ್ವರಿಗೆ ವೈಭವದಿಂದ ಪೂಜೆ ಜರುಗಿತು.
ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಸರ್ಕಾರಿ ಅಭಿಯೋಜಕರಾಗಿರುವ ಎಂ. ನಾಗಣ್ಣ, ತುಮಕೂರು ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ವಿ. ನಾವಲಗಿ ಮುಖ್ಯ ಅತಿಥಿಗಳಾಗಿದ್ದರು. ಕನ್ನಡದ ಯುವಕರು ಹೆಚ್ಚು ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳಾಗಬೇಕು, ನ್ಯಾಯಾಂಗದಲ್ಲಿ ಸಂಪೂರ್ಣವಾಗಿ ಕನ್ನಡದಲ್ಲೇ ವ್ಯವಹಾರ ನಡೆಯಬೇಕು, ಆಡು ಭಾಷೆಯಲ್ಲಿ ಸಾಧ್ಯವಾದಷ್ಟೂ ಕನ್ನಡ ಪದಗಳನ್ನು ಬಳಸಬೇಕು, ಕನ್ನಡ ಸಂಸ್ಕೃತಿ ಪರಂಪರೆಯ ಉಳಿವಿಗೆ ಕನ್ನಡಿಗರು ಕಂಕಣಬದ್ಧರಾಗಬೇಕು ಎಂಬಿತ್ಯಾದಿ ಸಲಹೆಗಳು ಮೂಡಿಬಂದವು.
ತುಮಕೂರು ಬೆಂಗಳೂರು ನಡುವೆ ಸಂಚಾರದ ಒತ್ತಡ ಇರುವುದರಿಂದ ಹತ್ತು ಬೋಗಿಗಳು ಸಾಲದಾಗಿದ್ದು, ಇನ್ನೂ ಐದು ಹೆಚ್ಚು ಬೋಗಿಗಳನ್ನು ಅಳವಡಿಸಲು ಒತ್ತಾಯವೂ ಬಂತು. ತುಮಕೂರು ರೈಲ್ವೆ ವ್ಯವಸ್ಥಾಪಕ ಚಂದ್ರಶೇಖರ್, ವಾಣಿಜ್ಯ ವ್ಯವಸ್ಥಾಪಕ ಬಿ. ಹನುಮಂತಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.
ಸನ್ಮಾನ : ಇದೇ ಸಂದರ್ಭದಲ್ಲಿ 25ಕ್ಕೂ ಹೆಚ್ಚು ವರ್ಷಗಳ ಕಾಲ ರೈಲಿನಲ್ಲಿ ನಿತ್ಯ ಪ್ರಯಾಣಿಸಿದ ಬೆಂಗಳೂರಿನ ನಿವೃತ್ತ ಹಿರಿಯ ಸಂಶೋಧಕ ಎಸ್.ಎನ್. ಸಂಪತ್ಕುಮಾರ್, ಬಿ. ನಾಗರಾಜಯ್ಯ, ನಿವೃತ್ತ ಶಿಕ್ಷಕಿ ರಾಜಮ್ಮ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ನಟರಾಜ್ ಇಸುವನ ಹಳ್ಳಿ ಸ್ವಾಗತಿಸಿದರು. ಸಿ. ರಮೇಶ್ ವಂದಿಸಿದರು. ರೈಲು ಗೊಲ್ಲಹಳ್ಳಿಯ ಬಳಿಗೆ ಬರುವ ಹೊತ್ತಿಗೆ ಕಾರ್ಯಕ್ರಮ ಮುಕ್ತಾಯವಾಯಿತು. ಸಿದ್ದಗಂಗಾ ವಿದ್ಯಾಸಂಸ್ಥೆಯ ಅಂಧ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಿತು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications