ತಮಿ-ಳು-ನಾ-ಡು, ಆಂಧ್ರ-ಪ್ರ-ದೇ-ಶ, ಪಾಂಡಿ-ಚೇ-ರಿ-ಗ-ಳ-ಲ್ಲಿ ಚಂಡ-ಮಾ-ರು-ತ ಭೀ-ತಿ
ಪಾಂಡಿಚೇರಿ : ಕೇಂದ್ರಾಡಳಿತ ಪ್ರದೇಶ ಪಾಂಡಿಚೇರಿ ಹಾಗೂ ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳ ಕೆಲವು ಭಾಗಗಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಆಗಿರುವ ವಾಯುಭಾರ ಕುಸಿತದಿಂದ ಈ ರಾಜ್ಯಗಳಿಗೆ ಸೇರಿದ ತೀರಪ್ರದೇಶದ ಕೆಲವು ಭಾಗಗಳಿಗೆ ಚಂಡಮಾರುತ ಅಪ್ಪಳಿಸಲಿದೆ. ಪಾಂಡಿಚೇರಿಯ ತೀರಪ್ರದೇಶದ ಭಾಗಗಳಲ್ಲಿ ಬಿರುಗಾಳಿಯಿಂದ ಕೂಡಿದ ತುಂತುರು ಮಳೆ ಮಂಗಳವಾರ ಸಂಜೆಯಿಂದಲೇ ಬೀಳತೊಡಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪಾಂಡಿಚೇರಿಯಲ್ಲಿನ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳತೊಡಗಿದ್ದಾರೆ. ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದ್ದು, ವಾಹನಗಳನ್ನು ಸನ್ನದ್ದ ಸ್ಥಿತಿಯಲ್ಲಿಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕೊಟ್ಟಕುಪ್ಪಮ್ ಹತ್ತಿರದ ನೆಡುಕುಪ್ಪಂ ಹಳ್ಳಿಯಲ್ಲಿ ಮೀನುಗಾರರ ಸುಮಾರು 70 ಬಲೆಗಳನ್ನು ಅಲೆಗಳು ಕೊಚ್ಚಿಕೊಂಡು ಹೋಗಿವೆ. ಮೀನುಗಾರರು ತಮ್ಮ ದೋಣಿಗಳನ್ನು ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಚೆನ್ನೈ ವರದಿ : ಕುಡ್ಡಲೂರಿನ ಪಶ್ಚಿಮ ಭಾಗಕ್ಕೆ 100 ಕಿಲೋ ಮೀಟರ್ ದೂರದಲ್ಲಿ ಬಂಗಾಳಕೊಲ್ಲಿಯಲ್ಲಿ ಕೇಂದ್ರೀಕೃತಗೊಂಡಿರುವ ಚಂಡಮಾರುತದಿಂದ ತಮಿಳುನಾಡಿನ ಉತ್ತರ ಭಾಗದ ತೀರಪ್ರದೇಶದ ಕೆಲವು ಭಾಗಗಳಲ್ಲಿ ಬುಧವಾರ ಸಂಜೆಯ ಹೊತ್ತಿಗೆ ಮಳೆ ಬೀಳಲಿದೆ. ಈ ಸಂಬಂಧ ವಿಶೇಷ ಪ್ರಕಟಣೆ ಮಾಡಿರುವ ಹವಾಮಾನ ಇಲಾಖೆ ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡಿದೆ. ಬಿರುಗಾಳಿಯು ಗಂಟೆಗೆ 150ರಿಂದ 170 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಭಾಗದ ಕೆಲವು ಪ್ರದೇಶಗಳಲ್ಲಿ 17ರಿಂಗ 35 ಮಿಲಿಮೀಟರ್ ಮಳೆ ಬಿದ್ದಿದೆ.
ಹೈದರಾಬಾದ್ ವರದಿ : ಚಂಡಮಾರುತದ ಭೀತಿಯಿರುವ ನೆಲ್ಲೂರು ಜಿಲ್ಲೆಯ ತೀರಪ್ರದೇಶದ ಸುಮಾರು 12 ಸಾವಿರ ಜನರನ್ನು ಸ್ಥಳ ಬಿಡುವಂತೆ ಸೂಚಿಸಲಾಗಿದ್ದು, ಈ ಭಾಗಗಳಲ್ಲಿ ಭಾರೀ ಮಳೆ ಮನ್ಸೂಚನೆ ನೀಡಲಾಗಿದೆ. ಈ ಭಾಗದ ಇನ್ನೂ 40 ಸಾವಿರ ಜನರ ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ ಎಂದು ನೆಲ್ಲೂರು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಚಿತ್ತೂರು, ಕಡಪಾ ನೆಲ್ಲೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications