Get Updates
Get notified of breaking news, exclusive insights, and must-see stories!

ಬೆಟಗೇರಿಯಲ್ಲಿ ಆನಂದಕಂದರ ಶತಮಾನೋತ್ಸವ ಕಾರ್ಯಕ್ರಮ

ಬೆಟಗೇರಿ : ಕನ್ನಡ ಸಾರಸ್ವತ ಲೋಕದ ದಿಗ್ಗಜರಲ್ಲೊಬ್ಬರಾದ ಆನಂದಕಂದ ಎಂಬ ಕಾವ್ಯನಾಮದಿಂದ ಖ್ಯಾತರಾಗಿದ್ದ ಪತ್ರಕರ್ತ, ಸಾಹಿತಿ ಬೆಟಗೇರಿ ಕೃಷ್ಣಶರ್ಮರ ಸೇವೆಯನ್ನು ಗುರುತಿಸುವಲ್ಲಿ ಹಿಂದೆಬಿದ್ದ ಕನ್ನಡದ ಜನತೆಯಿಂದ ಶರ್ಮರಿಗೆ ಅಪಾರ ಅನ್ಯಾಯವಾಯಿತು ಎಂದು ಕನ್ನಡ ಕಾವಲು ಸಮಿತಿಯ ಮಾಜಿ ಅಧ್ಯಕ್ಷ ಪಾಟೀಲ ಪುಟ್ಟಪ್ಪ ಅಭಿಪ್ರಾಯಪಟ್ಟಿದ್ದಾರೆ.

ಗೋಕಾಕ ತಾಲೂಕಿನ ಬೆಟಗೇರಿಯಲ್ಲಿ ನಡೆದ ಕೃಷ್ಣಶರ್ಮರ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಕನ್ನಡ ಜನರೂ ಕೃಷ್ಣಶರ್ಮರನ್ನು ಗುರುತಿಸುವ ಕಾರ್ಯ ಮಾಡಲಿಲ್ಲ. ಈಗ ಸರಕಾರವೂ ಅವರನ್ನು ಉಪೇಕ್ಷಿಸಿದೆ. ಶತಮಾನೋತ್ಸವ ಸಂದರ್ಭದಲ್ಲಿಯಾದರೂ ಸರಕಾರ ಅವರನ್ನು ಸ್ಮರಿಸುವ ಮೂಲಕ ತನ್ನ ತಪ್ಪನ್ನು ತಿದ್ದಿಕೊಳ್ಳಬಹುದಿತ್ತು ಎಂದು ಅವರು ಹೇಳಿದರು. ರಾಷ್ಟ್ರಮಟ್ಟದಲ್ಲಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಶರ್ಮರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಲಿಲ್ಲ ಎಂದು ವಿಷಾದಿಸಿದರು.

ಶತಮಾನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಮರ್ಶಕ ಡಾ. ಕೀರ್ತಿನಾಥ ಕುರ್ತುಕೋಟಿ ಅವರು ಮಾತನಾಡಿ ಗಡಿಭಾಗದಲ್ಲಿ ಕನ್ನಡದ ಸುಪ್ರಭಾತ ಮೊಳಗಿಸಿದ ಆನಂದಕಂದರ ಸರಳ ಜೀವನದ ವೈಶಿಷ್ಟ್ಯಗಳನ್ನು ವಿವರಿಸಿದರು. ಸಾವಳಗಿಯ ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮಿಗಳು ಆಶೀರ್ವಚನ ನೀಡಿದರು. ಅಕ್ಕಿಸಾಗರದ ನಂಜನಗೂಡು ಶಿವಾಚಾರ್ಯ ಮಹಾಸ್ವಾಮಿಗಳು, ಚಂದ್ರಗಿರಿಯ ವೇದಮೂರ್ತಿ ಗಂಗಾಧರ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ದಸರಾ ಜಂಬೂಸವಾರಿಯನ್ನು ನೆನಪಿಸುವಂತೆ ಸಾಲಂಕೃತ ವಾಹನದಲ್ಲಿ ಬೆಟಗೇರಿ ಕೃಷ್ಣಶರ್ಮರ ಭಾವಚಿತ್ರದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಡೊಳ್ಳುಕುಣಿತ, ಕರಡಿ ಮಜಲು ಮುಂತಾದ ಜನಪದ ನೃತ್ಯಗಳು ಜನಾಕರ್ಷಣೆಯ ಕೇಂದ್ರಬಿಂದುವಾಗಿದ್ದವು. ಇದೇ ಸಂದರ್ಭದಲ್ಲಿ ಆನಂದಕಂದರ ಹೆಸರಿನಲ್ಲಿ ನಿರ್ಮಿಸಲಾಗಿರುವ ಸಮುದಾಯಭವನದ ಅನಾವರಣವೂ ನಡೆಯಿತು.

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+