ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹುಬ್ಬಳ್ಳಿ ಜವಳಿ ಉದ್ಯಮಿಗಳಿಂದ ಬೆಂಗಳೂರು ಚಲೋ

By Staff
|
Google Oneindia Kannada News

ಹುಬ್ಬಳ್ಳಿ : ಅವಳಿ ನಗರದ ಜವಳಿ ಉದ್ಯಮಿಗಳು ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಜವಳಿ ಮೇಳದಲ್ಲಿ ಭಾಗವಹಿಸಲು ಬೆಂಗಳೂರು ಚಲೋ ಘೋಷಣೆಯಡಿಯಲ್ಲಿ ಬೆಂಗಳೂರಿಗೆ ಹೊರಡಲಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕರ್ನಾಟಕ ಹ್ಯಾಂಡ್‌ಲೂಮ್‌ ನೇಕಾರರ ಸಂಘದ ಅಧ್ಯಕ್ಷ ನಿತ್ಯಾನಂದಸ್ವಾಮಿ, ಸತ್ಯಂ ಸಮಿತಿಯ ವರದಿ ಪ್ರಕಾರ ಹೊಸ ಜವಳಿ ನೀತಿಯನ್ನು ಪ್ರಕಟಿಸುವಂತೆ ಕೇಂದ್ರವನ್ನು ಒತ್ತಾಯಿಸಿ ಡಿಸೆಂಬರ್‌ 6ರಂದು ಈ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದರು.

ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣದಿಂದ ಜವಳಿ ಉದ್ಯಮಕ್ಕೆ ಸಾಕಷ್ಟು ಹಿನ್ನಡೆ ಉಂಟಾಗಿದೆ. ಜವಳಿ ಉದ್ಯಮ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರ ಸಮಸ್ಯೆಗಳನ್ನು ಸಮ್ಮೇ-ಳ-ನ-ದ-ಲ್ಲಿ ಚರ್ಚಿಸಲಾಗುವುದು ಎಂದು ನಿತ್ಯಾನಂದ ಸ್ವಾಮಿ ಹೇಳಿದರು.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X