ಬಡವರ ರೋಗ ನಿವಾರಣೆಗೆ ವಿಶ್ವೇಶ ತೀರ್ಥಸ್ವಾಮಿಗಳ ಹೊಸ ಯೋಜನೆ
ಉಡುಪಿ : ಬಡಬಗ್ಗರ ತ್ವರಿತ ಚಿಕಿತ್ಸೆ ಮತ್ತು ಅಂಗವಿಕಲರು ಹಾಗೂ ಹಿಂದುಳಿದ ಹಳ್ಳಿಗಳ ಜನರಿಗೆ ನೆರವು ನೀಡುವಂಥ ಹೊಸ ಯೋಜನೆಯನ್ನು ಸದ್ಯದಲ್ಲೇ ಜಾರಿಗೆ ತರಲಿದ್ದೇವೆ ಎಂದು ಪರ್ಯಾಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಗುರುವಾರ ತಿಳಿಸಿದ್ದಾರೆ.
‘ನಾನು ಸನ್ಯಾಸ ದೀಕ್ಷೆ ಸ್ವೀಕರಿಸಿದ 62ನೇ ವರ್ಷ ಪೂರ್ಣವಾಗುವ ಸಂದರ್ಭ, ಡಿಸೆಂಬರ್ 6ರಂದು ಯೋಜನೆ ಜಾರಿಗೆ ಬರಲಿದೆ. ಹೃದ್ರೋಗ ಚಿಕಿತ್ಸೆ, ಕಿಡ್ನಿ ತೊಂದರೆ ಹಾಗೂ ಕಣ್ಣಿನ ದೋಷಗಳಂಥ ಆರೋಗ್ಯದ ಸಮಸ್ಯೆ ಇರುವ ತೀರಾ ಬಡ ಜನರ ತ್ವರಿತ ಚಿಕಿತ್ಸೆಗೆ ಯೋಜನೆಯಡಿಯಲ್ಲಿ ನೆರವು ನೀಡಲಾಗುವುದು. ಸಹಾಯಾರ್ಥಿಗಳನ್ನು ಗುರ್ತಿಸಲು ಒಂದು ಸಮಿತಿಯನ್ನೂ ರಚಿಸಲಾಗಿದೆ’ ಎಂದು ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಶಾಲೆ, ಬೀದಿ ದೀಪಗಳು ಹಾಗೂ ಕನಿಷ್ಠ ನೀರಿನ ಬಾವಿಯೂ ಇಲ್ಲದ ಹಳ್ಳಿಗಳನ್ನು ಸಮಿತಿ ಗುರ್ತಿಸಲಿದೆ. ಈ ಗ್ರಾಮ ಹಾಗೂ ಬಡ ಜನರಿಗೆ ನೆರವಾಗುವ ಯೋಜನೆಗೆ ಸ್ವಯಂ ಸೇವಾ ಸಂಸ್ಥೆಗಳು, ಆಸ್ಪತ್ರೆಗಳು ಮತ್ತು ಬ್ಯಾಂಕ್ಗಳಿಂದ ಹಣದ ನೆರವನ್ನು ಪಡೆಯಲಾಗುವುದು ಎಂದರು.
ಜನವರಿಗೆ ರಾಜಾಂಗಣ ಸಿದ್ಧವಾಗಲಿದೆ : ಪ್ರಸ್ತುತ ನಿರ್ಮಾಣ ಹಂತದಲ್ಲಿರುವ 1 ಕೋಟಿ ರುಪಾಯಿ ವೆಚ್ಚದ ‘ರಾಜಾಂಗಣ’ ಸಭಾಂಗಣ ಮುಂದಿನ ಜನವರಿ ಹೊತ್ತಿಗೆ ಪೂರ್ಣವಾಗಲಿದ್ದು, ಪ್ರಧಾನಿ ಎ.ಬಿ. ವಾಜಪೇಯಿ ಅವರನ್ನು ಅದರ ಉದ್ಘಾಟನೆಗೆ ಕರೆಯಬೇಕು ಅಂದುಕೊಂಡಿದ್ದೇವೆ ಎಂದು ಸ್ವಾಮೀಜಿ ತಿಳಿಸಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications