ಹೇಮವತಿ ನಾಲೆ ಒಡೆದು ಭಾರಿ ಹಾನಿ
ಮೈಸೂರು : ಮಂಡ್ಯ ಸಮೀಪದ ಕಡಬಾ ಹಾಗೂ ಲಿಂಗಾಪುರ ಗ್ರಾಮದ ಬಳಿ ಹೇಮಾವತಿ ಮುಖ್ಯ ನಾಲೆ ಒಡೆದು ತಗ್ಗು ಪ್ರದೇಶದ ಕೃಷಿ ಭೂಮಿಗೆ ನೀರು ನುಗ್ಗಿದ ಪರಿಣಾಮವಾಗಿ 40 -50 ಲಕ್ಷ ರುಪಾಯಿಗಳಷ್ಟು ಬೆಳೆ ನಾಶವಾಗಿದೆ ಎಂದು ಪ್ರಾಥಮಿಕ ಅಂದಾಜು ವರದಿಗಳು ತಿಳಿಸಿವೆ.
ಹೇಮಾವತಿ ಮುಖ್ಯ ನಾಲೆಯ ಹೊಸ ಮತ್ತು ಹಳೆಯ ಎರಡೂ ನಾಲೆಗಳೂ ಹಾನಿಗೊಳಗಾಗಿದ್ದು, ಕಡಬಾ, ಬೋರೇಗೌಡನ ಕೊಪ್ಪಲು, ಲಿಂಗಾಪುರ, ಚಿನಕುರಳಿ, ಕಾಳೇಗೌಡನ ಕೊಪ್ಪಲು, ಹಿಳ್ಳೇನ ಹಳ್ಳಿ ಮೊದಲಾದ ಗ್ರಾಮಗಳ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. ಗ್ರಾಮದ ಸಂಪರ್ಕ ರಸ್ತೆಗಳಿಗೂ ಕಡಿದುಹೋಗಿವೆ.
ನೆರೆ ರಾಜ್ಯದ ಚಂಡಮಾರುತದ ಪರಿಣಾಮವಾಗಿ ಹೇಮಾವತಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಪರಿಸ್ಥಿತಿ ತೀವ್ರಗೊಂಡಿದೆ. ನಾಲೆ ಮತ್ತಷ್ಟು ಒಡೆಯುವ ಸಾಧ್ಯತೆಗಳೂ ಇದೆ ಎಂಬ ವರದಿಗಳಿವೆ.
ಹೇಮಾವತಿ ನಾಲೆ ಒಡೆದಿರುವುದರಿಂದ ಹೇಮಾವತಿ ಅಣೆಕಟ್ಟೆಯಿಂದ ಬಿಡಲಾಗುವ ನೀರನ್ನು ನಿಲ್ಲಿಸಲಾಗಿದ್ದು, ತುಮಕೂರು ಹಾಗೂ ನಾಗಮಂಗಲದಲ್ಲಿ ನೀರಿನ ಸಮಸ್ಯೆ ತಲೆದೋರುವ ಲಕ್ಷಣಗಳಿವೆ. ತಗ್ಗು ಪ್ರದೇಶದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಹಿರಿಯ ಅಧಿಕಾರಿಗಳು ಹಾನಿಗೊಳಗಾದ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾಮಗಾರಿಗೆ ಆದೇಶಿದ್ದಾರೆ.
ಬೆಳೆ ಬಂದಾಗ ಬೆಲೆ ಇಲ್ಲದೆ, ಬೆಲೆ ಇದ್ದಾಗ ಬೆಳೆ ಹಾನಿಗೆ ಒಳಗಾಗುವ ರೈತ ಈ ಬಾರಿ ಪ್ರಕೃತಿ ವಿಕೋಪದಿಂದ ಕಂಗೆಟ್ಟಿದ್ದಾನೆ. ಈಗ ನಾಲೆಯ ಕಳಪೆ ಕಾಮಗಾರಿಯಿಂದಾಗಿ ತಾವು ಭಾರಿ ನಷ್ಟ ಅನುಭವಿಸುವಂತಾಗಿದೆ ಎಂಬುದು ರೈತರ ಆರೋಪ. ನಾಲೆ ಏಕೆ ಒಡೆಯಿತು ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ದುರಸ್ತಿ ಕಾರ್ಯಕ್ಕೆ ಆದೇಶ ನೀಡಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications