ಪಂಚತಾರಾ ಹೊಟೇಲಿನಲ್ಲಿ ಇಬ್ಬರು ಮಕ್ಕಳೊಂದಿಗೆ ದಂಪತಿಗಳ ಆತ್ಮಹತ್ಯೆ
ಬೆಂಗಳೂರು : ನಗರದ ಓಬೆರಾಯ್ ಪಂಚತಾರಾ ಹೋಟೆಲಿನಲ್ಲಿ ಆಂಧ್ರಪ್ರದೇಶದ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸೋಮವಾರ ವರದಿಯಾಗಿದೆ.
ಮೃತ ದಂಪತಿಗಳನ್ನು ಶ್ರೀನಿವಾಸ್ ಹಾಗೂ ಜಯಲಕ್ಷ್ಮಿ ಎಂದು ಪೊಲೀಸರು ಗುರ್ತಿಸಿದ್ದಾರೆ. ಹೊಟೇಲಿನಲ್ಲಿ ವಾಸ್ತವ್ಯ ಹೂಡಿದ ಸ್ವಲ್ಪ ಹೊತ್ತಿನಲ್ಲೇ ಹಣ್ಣಿನ ರಸವನ್ನು ತರಿಸಿಕೊಂಡ ದಂಪತಿಗಳು ಅದರಲ್ಲಿ ವಿಷ ಬೆರೆಸಿ ಸೇವಿಸಿದ್ದಾರೆ. ವಿಷ ಸೇವಿಸುವ ಮುನ್ನ ತಮ್ಮ 18 ತಿಂಗಳ ಗಂಡು ಮಗು ಹಾಗೂ 3 ವರ್ಷದ ಮಗಳಿಗೆ ವಿಷ ಉಣ್ಣಿಸಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ.
ಶ್ರೀನಿವಾಸ್ ಹಾಗೂ ಜಯಲಕ್ಷ್ಮಿ ಅವರದ್ದು ಪ್ರೇಮ ವಿವಾಹ. ನಾಲ್ಕು ವರ್ಷಗಳ ಹಿಂದೆ ಅವರ ವಿವಾಹವಾದಾಗ ಶ್ರೀನಿವಾಸ್ ಅವರ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು . ಇತ್ತೀಚೆಗೆ ಅವರ ಮರು ವಿವಾಹಕ್ಕೆ ಮತ್ತೊಂದು ಹೆಣ್ಣನ್ನು ಗೊತ್ತು ಪಡಿಸಿ, ಡಿಸೆಂಬರ್ 6 ರಂದು ಮದುವೆಯನ್ನು ಗೊತ್ತು ಪಡಿಸಿದ್ದರು. ಇದರಿಂದ ಬೇಸತ್ತ ಶ್ರೀನಿವಾಸ್ ಅವರು ಹೆಂಡತಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತಮ್ಮ ಮರಣಕ್ಕೆ ಕಾರಣಗಳನ್ನು ಪತ್ರದಲ್ಲಿ ಬರೆದಿರಿಸಿದ್ದಾರೆ.
(ಯುಎನ್ಐ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications