ಕೆ.ಆರ್.ಪೇಟೆಯಲ್ಲಿ ಕಂದುಹುಳುವಿನ ಉಪದ್ರವ
ಕೆ.ಆರ್. ಪೇಟೆ : ತಾಲ್ಲೂಕಿನಲ್ಲಿ ಭತ್ತದ ಬೆಳೆಗೆ ಕಂದು ಜಿಗಿ ಹುಳುವಿನ ಬಾಧೆ ಕಾಣಿಸಿಕೊಂಡಿದ್ದು , ರೈತರು ತಕ್ಷಣವೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಕೆ.ಆರ್. ಪೇಟೆಯ ಸಹಾಯಕ ಕೃಷಿ ನಿರ್ದೇಶಕ ಕೆ. ರಾಮಕೃಷ್ಣೇ ಗೌಡ ತಿಳಿಸಿದ್ದಾರೆ.
ಬೆಣೆಯಾಕಾರದ ಕಂದು ಜಿಗಿ ಹುಳುಗಳು ಭತ್ತದ ತೆಂಡೆಯ ಬುಡ ಭಾಗದಲ್ಲಿ ರಸ ಹೀರುತ್ತವೆ. ಪೊಟ್ಯಾಷ್ ಅಭಾವ ಮತ್ತು ಮಿತಿ ಮೀರಿದ ಸಾರಜನಕ ಬಳಕೆ, ವಾತಾವರಣದ ಏರು ಪೇರಿನಿಂದಾಗಿ ಈ ಹುಳುಗಳು ವ್ಯಾಪಕವಾಗಿ ಹರಡುತ್ತಿವೆ ಎನ್ನಲಾಗಿದೆ. ಜಕ್ಕನ ಹಳ್ಳಿ, ಹಾವನೂರ, ತೆಂಡೇಕೆರೆ, ಶಿವಪುರ, ಅಕ್ಕಿಹೆಬ್ಬಾಳು, ಕಸಬಾ ಹೋಬಳಿಯಲ್ಲಿ ಈ ಹುಳುಗಳ ಬಾಧೆ ಹೆಚ್ಚಾಗಿ ಕಂಡು ಬಂದಿದೆ.
ಹುಳುಗಳ ನಿಯಂತ್ರಣಕ್ಕೆ, ಗದ್ದೆಯಲ್ಲಿ ಚೆನ್ನಾಗಿ ನೀರು ಬಸಿದು, ಭೂಮಿ ಸ್ವಲ್ಪ ಒಣಗುವಂತೆ ಮಾಡಬೇಕು. ಭತ್ತದ ಗಿಡಗಳ ಬುಡ ಭಾಗವನ್ನು ಅತ್ತಿತ್ತ ಸರಿಸಿ, ಬಿಸಿಲು ಬೀಳುವಂತೆ ಮಾಡಬೇಕು ಎಂದು ರೈತರಿಗೆ ಸೂಚಿಸಲಾಗಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications