ಇನ್ನೆರಡು ದಿನದಲ್ಲಿ ಇಂಫಾಲದಿಂದ ರಾಜ್ಯಕ್ಕೆ ಬಿಎಸ್ಎಫ್- ಸಿ.ದಿನಕರ್
ಬೆಂಗಳೂರು : ಅರಣ್ಯ ಪ್ರದೇಶದ ಕಾರ್ಯಾಚರಣೆಯಲ್ಲಿ ಪಳಗಿದ ಗಡಿಭದ್ರತಾ ಪಡೆಯ ತಂಡ ವೀರಪ್ಪನ್ ಶಿಕಾರಿಯಲ್ಲಿ ಉಭಯ ರಾಜ್ಯಗಳ ಎಸ್ಟಿಎಫ್ ತಂಡಕ್ಕೆ ನೆರವಾಗಲು ಇನ್ನೆರಡು ದಿನಗಳಲ್ಲಿ ಮಣಿಪುರದ ಇಂಫಾಲದಿಂದ ಕರ್ನಾಟಕಕ್ಕೆ ಆಗಮಿಸಲಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸಿ. ದಿನಕರ್ ಹೇಳಿದ್ದಾರೆ.
ಗಡಿ ಭದ್ರತಾ ಪಡೆಯ ಆಗಮನದ ಬಗ್ಗೆ ನಮಗೆ ಸುದ್ದಿ ಬಂದಿದೆ. ಡಿಸೆಂಬರ್ 8 ಮತ್ತು 9 ರಂದು ಎರಡು ತಂಡಗಳಲ್ಲಿ ಬಿಎಸ್ಎಫ್ ಪಡೆ ಆಗಮಿಸುತ್ತದೆ. ತಂಡದಲ್ಲಿ ಕಮಾಂಡೋಗಳೂ ಇರುತ್ತಾರೆ ಎಂದು ಬುಧವಾರ ಇಳಿಸಂಜೆ ಯುಎನ್ಐನೊಂದಿಗೆ ಮಾತನಾಡಿದ ದಿನಕರ್ ಹೇಳಿದರು.
ವೀರಪ್ಪನ್ ಶಿಕಾರಿಯಲ್ಲಿ ಪಾಲ್ಗೊಂಡಿರುವ ವಿಶೇಷ ಕಾರ್ಯಾಚರಣೆ ಪಡೆಯ 2 ಸಾವಿರ ಪೊಲೀಸರಿಗೆ ಬಿಎಸ್ಎಫ್ ಆಗಮನ ನೈತಿಕ ಸ್ಥೈರ್ಯ ತುಂಬುವುದೆಂದು ನಿರೀಕ್ಷಿಸಲಾಗಿದೆ. ಈ ಬಾರಿ ಕಾಡುಗಳ್ಳನ ಶಿಕಾರಿಗೆ ಆಗಮಿಸುತ್ತಿರುವ ಪಡೆಯ ಯೋಧರು ಭಯೋತ್ಪಾದನೆ ನಿಗ್ರಹ ಚಟುವಟಿಕೆಗಳಲ್ಲಿ ಹೆಸರು ಮಾಡಿದ್ದು , ಅರಣ್ಯ ಪ್ರದೇಶದ ಪರಿಚಯವನ್ನೂ ಹೊಂದಿದ್ದಾರೆ. ಯೋಧರು ಅತ್ಯಾಧುನಿಕ ಆಯುಧಗಳನ್ನು ಹೊಂದಿದ್ದಾರೆ ಎಂದು ಬಿಎಸ್ಎಫ್ ಅಧಿಕೃತ ಮೂಲಗಳು ತಿಳಿಸಿವೆ. ಕಳೆದ ಬಾರಿ ಶಿಕಾರಿ ಪ್ರಯತ್ನದಲ್ಲಿ ಭಾಗವಹಿಸಿ ವಿಫಲವಾಗಿದ್ದ 300 ಯೋಧರ ಬಿಎಸ್ಎಫ್ ಪಡೆ ಕಾಡಿನ ಕಾರ್ಯಾಚರಣೆಗೆ ಅಗತ್ಯವಾದ ಅನುಭವ ಹೊಂದಿರಲಿಲ್ಲ ಎನ್ನಲಾಗಿದೆ.
ವೀರಪ್ಪನ್ ಸಮಸ್ಯೆ ಪ್ರಾದೇಶಿಕ ಸಮಸ್ಯೆಯಾಗಿರುವುದರಿಂದ, ಕಾರ್ಯಾಚರಣೆಗೆ ಬಿಎಸ್ಎಫ್ ಪಡೆಗಳನ್ನು ಕಳುಹಿಸಲು ಸಾಧ್ಯವಿಲ್ಲ ಎಂದು ಕೆಲವು ದಿನಗಳ ಹಿಂದಷ್ಟೇ ಹೇಳಿದ್ದ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ಹೇಳಿಕೆಗೆ ಪ್ರತಿಕ್ರಿಯೆ ವ್ಯಕ್ತ ಪಡಿಸಲು ಮೂಲಗಳು ನಿರಾಕರಿಸಿವೆ.
(ಯುಎನ್ಐ)
ವಾರ್ತಾ ಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications