ವಿಚಾರಣಾಧೀನ ಕೈದಿಗಳಿಗೆ ಪ್ರತ್ಯೇಕ ಜೈಲು ಸ್ಥಾಪನೆಗೆ ಸರ್ಕಾರದ ನಿರ್ಧಾರ
- ಎಂ.ಕೆ. ಮಧುಸೂದನ್
ವಿಚಾರಣಾಧೀನ ಕೈದಿಗಳನ್ನು ಕೋರ್ಟ್ಗೆ ಹಾಜರು ಪಡಿಸುವಲ್ಲಿ ತಡವಾಗುತ್ತಿರುವುದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸಿತು. ವಿಚಾರಣೆಯು ತಡವಾಗುತ್ತಿರುವುದರಿಂದ ಜಿಲ್ಲಾ ಕೋರ್ಟುಗಳಲ್ಲಿಯೂ ಕ್ರಿಮಿನಲ್ ಕೇಸುಗಳು ಇತ್ಯರ್ಥವಾಗುವುದು ತಡವಾಗುತ್ತಿವೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ. ಸರಕಾರವು ಆರೋಪಗಳನ್ನು ಎದುರಿಸುತ್ತಿರುವ ವಿಚಾರಣಾಧೀನ ಕೈದಿಗಳಿಗೆ, ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಪ್ರಯೋಗಾತ್ಮಕವಾಗಿ ಪ್ರತ್ಯೇಕ ಕಾರಾಗೃಹ ನಿರ್ಮಿಸಲು ಒಪ್ಪಿಕೊಂಡಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಇದಕ್ಕಾಗಿ 2.5 ಕೋಟಿ ರೂಪಾಯಿಗಳನ್ನು ವ್ಯಯಿಸುವುದಾಗಿ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಿಳಿಸಿದೆ.
ವಿಚಾರಣೆಯಾಗದೇ ಜೈಲಿನಲ್ಲಿ ಉಳಿದಿರುವ ಕೈದಿಗಳ ಕುರಿತು ಪರಿಶೀಲನೆ ನಡೆಸಲು ಹೈ ಕೋರ್ಟ್ ಮಹಿಳಾ ನ್ಯಾಯವಾದಿ ಪ್ರಮೀಳಾ ನೇಸರ್ಗಿಯವರನ್ನು ನೇಮಿಸಿದೆ. ಈ ನಡುವೆ ರಾಜ್ಯದ ಜೈಲುಗಳಲ್ಲಿ ಸಿಬ್ಬಂದಿ ಕೊರತೆ ಕಂಡು ಬಂದಿದ್ದು, ಸದ್ಯಕ್ಕೆ 627 ಪೊಲೀಸ್ ಸಿಬ್ಬಂದಿಯನ್ನು ಜೈಲುಗಳಲ್ಲಿರುವ ಖಾಲಿ ಹುದ್ದೆಗಳಿಗೆ ಪ್ರತಿ ನಿಯೋಜಿಸಲು ನಿರ್ಧರಿಸಿದೆ.
ವಿಚಾರಣಾಧೀನ ಮಹಿಳಾ ಕೈದಿಗಳಿಗಾಗಿ, ರಾಜ್ಯ ಕಾನೂನು ಸೇವಾ ಪ್ರಾಧಿಕಾರ ( ಕೆಎಸ್ಎಲ್ಎ) ವಕೀಲರ ಉಚಿತವಾಗಿ ನೇಮಿಸುವಂತೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಡಿ. ಎಂ. ಚಂದ್ರಶೇಖರ್ ಬರೆದಿರುವ ಪತ್ರವನ್ನೂ ಹೈಕೋರ್ಟ್ ಪರಿಗಣಿಸಿದೆ. ಪ್ರಸ್ತುತ 49 ಆಪಾದಿತ ಮಹಿಳೆಯರು ವಿಚಾರಣೆ ಇಲ್ಲದೆ ಜೈಲಿನಲ್ಲಿ ಕೊಳೆಯುತ್ತಿದ್ದಾರೆ ಎಂದು ಚಂದ್ರಶೇಖರ್ ಹೇಳಿದ್ದಾರೆ. ಕೆಎಸ್ಎಲ್ಎಯ ಕಾರ್ಯ ನಿರ್ವಾಹಕ ಅಧ್ಯಕ್ಷ ಎ. ಜೆ. ಸದಾಶಿವ ಅವರು ವಿಚಾರಣಾಧೀನ ಮಹಿಳಾ ಕೈದಿಗಳಿಗೆ ಅಗತ್ಯವಿರುವ ಕಾನೂನು ತಜ್ಞರನ್ನು ಒದಗಿಸಲು ತಾವಾಗಿಯೇ ಮುಂದೆ ಬಂದಿದ್ದಾರೆ. ವಿಚಾರಣಾಧೀನ ಕೈದಿಗಳಿಗೆ ಪ್ರತ್ಯೇಕ ಜೈಲು ಸ್ಥಾಪಿಸುವ ನಿಟ್ಟಿನಲ್ಲಿ ಸರಕಾರ ಶೀಘ್ರದಲ್ಲಿಯೇ ಕಾರ್ಯ ಪ್ರವೃತ್ತವಾಗಬೇಕು ಎಂದು ಹೈಕೋರ್ಟ್ ಹೇಳಿದೆ.
(ಐಎಎನ್ಎಸ್)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications