ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಉತ್ತರ ಒಳನಾಡಿನಲ್ಲಿ ಬೀಸಲಿದೆ ಶೀತ ಮಾರುತ
ಬೆಂಗಳೂರು : ರಾಜ್ಯದಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿದಿದೆ. ಮುಂದಿನ 48 ಗಂಟೆಗಳ ಅವಧಿಯಲ್ಲಿ ಉತ್ತರ ಒಳನಾಡಿನಲ್ಲಿ ಶೀತಮಾರುತ ತೀವ್ರಗೊಳ್ಳುವ ಸೂಚನೆಗಳಿವೆ.
ಎಂದಿನಂತೆ ಉತ್ತರ ಒಳನಾಡಿನ ಕೆಲವೆಡೆ, ಕರಾವಳಿಯ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಕನಿಷ್ಠ ತಾಪಮಾನದಲ್ಲಿ ಇಳಿತ ಕಂಡುಬಂದಿದೆ. ರಾಜ್ಯದಲ್ಲಿ ಅತಿ ಕಡಿಮೆ ತಾಪಮಾನ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 10.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆಯ ರೀತ್ಯ ಉತ್ತರ ಒಳನಾಡಿನಲ್ಲಿ ಶೀತ ಗಾಳಿ ತೀವ್ರವಾಗುವ ಲಕ್ಷಣಗಳಿದ್ದು, ಉಳಿದಂತೆ ಒಣಹವೆ ಇರುತ್ತದೆ. ಸ್ಥಳೀಯ ಹವಾಮಾನ ಮುನ್ಸೂಚನೆಯ ರೀತ್ಯ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಭ್ರ ಆಕಾಶವಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ಸೂಚನೆಗಳಿವೆ ಎನ್ನುತ್ತದೆ ಹವಾಮಾನ ವೀಕ್ಷಣಾಲಯದ ವರದಿ.
Comments
Story first published: Sunday, December 24, 2000, 5:30 [IST]