Get Updates
Get notified of breaking news, exclusive insights, and must-see stories!

9ರಂದು ವೀರಶೈವ ಜನಜಾಗೃತಿ ಸಮಾವೇಶ

ಬೆಂಗಳೂರು : ಜನಗಣತಿಯ ಪಟ್ಟಿಯಲ್ಲಿ ವೀರಶೈವ - ಲಿಂಗಾಯತ ಎಂದು ಬರೆಸುವಂತೆ ಜನಜಾಗೃತಿ ಮೂಡಿಸಲು ಅಖಿಲ ಭಾರತ ವೀರಶೈವ ಮಹಾಸಭಾ ನಡೆಸುತ್ತಿರುವ ಜನಜಾಗೃತಿ ವಾಹಿನಿ ಜಾಥಾ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದು, ಈ ಸಂಬಂಧ ಶನಿವಾರ ಬೃಹತ್‌ ಸಮಾವೇಶವೂ ನಡೆಯಲಿದೆ.

ಶನಿವಾರ ಬೆಳಗ್ಗೆ ಜಯದೇವ ಮುರುಘರಾಜೇಂದ್ರ ವಿದ್ಯಾರ್ಥಿ ನಿಲಯದಿಂದ ಆರಂಭವಾಗುವ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಮಲ್ಲೇಶ್ವರ ಆಟದ ಮೈದಾನದಲ್ಲಿ ಬಂದು ಸೇರಲಿದೆ ಎಂದು ಸಭಾದ ಪ್ರಧಾನ ಕಾರ್ಯದರ್ಶಿ ಎಚ್‌.ವಿ. ನಾಗೇಂದ್ರಪ್ಪ ತಿಳಿಸಿದ್ದಾರೆ.

ಸಿದ್ದಗಂಗಾ ಮಹಾಸಂಸ್ಥಾನದ ಮಠಾಧೀಶರಾದ ಡಾ. ಶಿವಕುಮಾರ ಸ್ವಾಮಿಯವರ ಸಾನ್ನಿಧ್ಯದಲ್ಲಿ ನಡೆಯುವ ಈ ಸಮಾವೇಶದಲ್ಲಿ ನಾಡಿನ ಸುಮಾರು 50ಕ್ಕೂ ಹೆಚ್ಚು ಮಠಾಧೀಶರುಗಳು, ಸಚಿವರು ಹಾಗೂ ಶಾಸಕರು ಪಾಲ್ಗೊಳ್ಳುವರು ಎಂದು ಅವರು ಹೇಳಿದರು.

2001ರ ಜನಗಣತಿಯಲ್ಲಿ ವೀರಶೈವ - ಲಿಂಗಾಯತ ಎಂದೇ ಬರೆಸುವಂತೆ, ಆಮೂಲಕ ವೀರಶೈವ ಜನಾಂಗದ ಬಗ್ಗೆ ನಿಖರ ಮಾಹಿತಿ ದೊರೆಯುವಂತಾಗಲು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ. ಈ ಸಂಬಂಧ ಕಳೆದ 25ರಿಂದ ಆರಂಭಗೊಂಡಿರುವ ಜಾಥಾ ಉಳವಿಯಿಂದ ಹೊರಟು ಬೆಳಗಾವಿ, ವಿಜಾಪುರ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಸಂಚರಿಸಿ ನಗರಕ್ಕೆ ಬಂದಿದ್ದು, ಇಲ್ಲಿಂದ ತುಮಕೂರಿಗೆ ತೆರಳಲಿದೆ ಎಂದೂ ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+