ಗ್ರಾಮೀಣಾಭಿವೃದ್ಧಿ : ಕೇಂದ್ರ ಸರ್ಕಾರದ ಅನುದಾನ ದುಪ್ಪಟ್ಟು ?
ಬೆಂಗಳೂರು : ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಈಗ ಕೊಡುತ್ತಿರುವ ಅನುದಾನವನ್ನು ಇಮ್ಮಡಿಗೊಳಿಸುವ ಬಗೆಗೆ ಸರ್ಕಾರ ಗಂಭೀರವಾಗಿ ಯೋಚಿಸುತ್ತಿದೆ ಎಂದು ಕೇಂದ್ರ ವಿತ್ತ ಸಚಿವ ಯಶವಂತ ಸಿನ್ಹಾ ಶುಕ್ರವಾರ ತಿಳಿಸಿದ್ದಾರೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಪ್ ಮೇನೇಜ್ಮೆಂಟ್ನಲ್ಲಿ ನಡೆದ ಅಭಿವೃದ್ಧಿಯಲ್ಲಿ ಸುಧಾರಣೆ ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ 2500 ಕೋಟಿ ರುಪಾಯಿ ನೀಡಲಾಗಿದೆ. ಇದನ್ನು ದುಪ್ಪಟ್ಟು ಹೆಚ್ಚಿಸುವ ಬಗ್ಗೆ ಗ್ರಾಮೀಣ ಇಲಾಖೆಯಾಂದಿಗೆ ಚರ್ಚಿಸಲಾಗುತ್ತಿದೆ ಎಂದು ಸಿನ್ಹ ಹೇಳಿದರು.
ನಾವು ಆರ್ಥಿಕ ಅಭಿವೃದ್ಧಿಗೆ ಯಾವುದೇ ರಾಷ್ಟ್ರವನ್ನು ಮಾದರಿಯಾಗಿಟ್ಟುಕೊಳ್ಳಲು ಸಾಧ್ಯವಿಲ್ಲ. ಕೇವಲ 30 ದಶಲಕ್ಷ ಡಾಲರ್ ವಿದೇಶೀ ಬಂಡವಾಳ ನಮಗೆ ಹರಿದು ಬರುತ್ತಿದೆ. ಕಂಪ್ಯೂಟರ್ ಸಾಫ್ಟ್ವೇರ್, ಜೈವಿಕ ತಂತ್ರಜ್ಞಾನ ಮತ್ತು ಔಷಧ ವಿಜ್ಞಾನ ಕ್ಷೇತ್ರಗಳಲ್ಲಿ ನಾವು ಅಭಿವೃದ್ಧಿ ಸಾಧಿಸುತ್ತೇವಾದರೂ, ಇದರಿಂದ ಸಾಮಾನ್ಯ ಜನರಿಗೆ ಏನು ಉಪಯೋಗ ಎಂಬ ಪ್ರಶ್ನೆ ಪ್ರತಿಧ್ವನಿಸುತ್ತಿದೆ. ಕೇವಲ ವಿದೇಶಿ ಬಂಡವಾಳ ಹರಿದು ಬರುವುದರಿಂದ ದೇಶದ ಆರ್ಥಿಕ ಪ್ರಗತಿ ಸಾಧ್ಯವಿಲ್ಲ ಎಂದರು.
ನಮ್ಮ ದೇಶಕ್ಕೆ ಸಮರ್ಪಕವಾದ ಅರ್ಥ ವ್ಯವಸ್ಥೆಯನ್ನು ನಾವೇ ರೂಪಿಸಿಕೊಳ್ಳಬೇಕು. ವೈಯಕ್ತಿಕ ಮಟ್ಟದಲ್ಲಿರುವ ಬಡತನ ನಿವಾರಣೆ ಸುಲಭ. ಒಬ್ಬನಿಗೆ ಕೆಲಸ ಸಿಕ್ಕರೆ ಒಂದು ಸಂಸಾರ ಆರ್ಥಿಕವಾಗಿ ಸಾಕಷ್ಟು ಸುಧಾರಿಸಬಲ್ಲುದು. ಆದರೆ ನಮ್ಮ ದೇಶದ ಬಡತನದ ಸಮಸ್ಯೆ ಹಾಗಲ್ಲ. ಎಷ್ಟೋ ಹಳ್ಳಿಗಳಲ್ಲಿ ಶಾಲೆಗಳಿಲ್ಲ, ಆಸ್ಪತ್ರೆಗಳಿಲ್ಲ. ಈ ನಿಟ್ಟಿನಲ್ಲಿ ಅಭಿವೃದ್ಧಿ ಸಾಧಿಸುವ ಕುರಿತು ನಾವು ಯೋಚಿಸಬೇಕು ಎಂದು ಸಿನ್ಹಾ ತಿಳಿಸಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications