ಆಕಾಶವಾಣಿ ಕೇಂದ್ರಗಳ ಖಾಸಗೀಕರಣ ಪ್ರಕ್ರಿಯೆ ಆರಂಭ
ಬೆಂಗಳೂರು : ಆಕಾಶವಾಣಿ ಕೇಂದ್ರಗಳ ಖಾಸಗೀಕರಣದ ಪ್ರಕ್ರಿಯೆಗೆ ಶನಿವಾರ ಬೆಂಗಳೂರಿನಲ್ಲಿ ಚಾಲನೆ ದೊರಕಿದೆ. ಮೊದಲ ಹಂತವಾಗಿ 40 ನಗರಗಳಲ್ಲಿ ಎಫ್.ಎಂ. ಸೇವಾ ವ್ಯವಸ್ಥೆ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಈ ವಿಷಯವನ್ನು ಕೇಂದ್ರ ವಾರ್ತಾ ಸಚಿವರಾದ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ 10 ಕಿ.ವ್ಯಾ. ಸಾಮರ್ಥ್ಯದ ವಿವಿಧ ಭಾರತಿಯ ಎಂ.ಎಮ್. ಸೇವೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಆಕಾಶವಾಣಿಯನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ ಎಂದರು. ಆದರೆ, ಆಕಾಶವಾಣಿಯ ಮುಖ್ಯ ವಾಹಿನಿಗಳನ್ನು ಖಾಸಗೀಕರಣ ಮಾಡುವುದಿಲ್ಲ. ಪ್ರಸಾರದ ಗುಣಮಟ್ಟವನ್ನು ಹೆಚ್ಚಿಸಿ, ಉತ್ತಮವಾದ ಶ್ರಾವ್ಯ ಸಾಮರ್ಥ್ಯದೊಂದಿಗೆ ಕಾರ್ಯಕ್ರಮಗಳು ಎಲ್ಲರನ್ನೂ ತಲುಪುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.
ಈ ನಿಟ್ಟಿನಲ್ಲಿ ಫ್ರೀಕ್ವೆನ್ಸಿ ಮಾಡುಲೇಷನ್ (ಎಫ್ಎಂ) ವ್ಯವಸ್ಥೆಯನ್ನು ಆರಂಭಿಸಲಾಗಿದೆ ಎಂದರು. ಎಫ್.ಎಂ. ಸೇವೆಯನ್ನು ಮಾತ್ರ ಖಾಸಗೀಕರಣ ಮಾಡಲಾಗುತ್ತದೆ ಎಂದೂ ಅವರು ಹೇಳಿದರು. ಬೆಂಗಳೂರು, ಅಹ್ಮದಾಬಾದ್, ಜೈಪುರ, ಶ್ರೀನಗರ, ಹೈದರಾಬಾದ್ ಹಾಗೂ ತಿರುವನಂತಪುರಗಳಲ್ಲೂ ಈ ಸೇವೆ ಆರಂಭವಾಗುತ್ತಿದೆ ಎಂದರು.
ಶ್ಲಾಘನೆ : ಮಂಗಳೂರು, ಧಾರವಾಡ, ಮೈಸೂರು ಕೇಂದ್ರಗಳ ಟ್ರನ್ಸ್ಮೀಟರ್ ಸಾಮರ್ಥ್ಯವನ್ನೂ ಹೆಚ್ಚಿಸಲಾಗುತ್ತಿದ್ದು, ನೂರಕ್ಕೆ ನೂರರಷ್ಟು ಶ್ರೋತೃಗಳಿಗೆ ಆಕಾಶವಾಣಿಯ ಸೇವೆ ದೊರಕಿಸಿಕೊಡಲಾಗುವುದು ಎಂದರು. ರಾಜ್ಕುಮಾರ್ ಅಪಹರಣ ಪ್ರಕರಣದ ಸಂದರ್ಭದಲ್ಲಿ ಬೆಂಗಳೂರು ಆಕಾಶವಾಣಿ ಪಾತ್ರವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.
ಕನ್ನಡ ಭಾಷಣ : ಬಳ್ಳಾರಿಯಲ್ಲಿ ಸೋನಿಯಾಗಾಂಧಿ ವಿರುದ್ಧ ಚುನಾವಣೆಗೆ ನಿಂತಿದ್ದ ಸಂದರ್ಭದಲ್ಲಿ ಕನ್ನಡದಲ್ಲಿ ಮಾತನಾಡುತ್ತಿದ್ದ ಸುಷ್ಮಾ ಇಲ್ಲೂ ನಾಲ್ಕು ನಿಮಿಷಗಳ ಕಾಲ ಕನ್ನಡದಲ್ಲಿಯೇ ಭಾಷಣ ಮಾಡಿದರು. ನಾನು ಪುನಃ ಕನ್ನಡ ಕಲಿಯುತ್ತಿದ್ದೇನೆ ಎಂದೂ ಹೇಳಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications