ಸೈಬರ್ ಅಪರಾಧ ತಡೆಗೆ ಸಮಗ್ರ ಕಾಯಿದೆ ನಿರ್ಧಾರ : ಸುಷ್ಮಾ ಸ್ವರಾಜ್
ಬೆಂಗಳೂರು : ಸೈಬರ್ ತಂತ್ರಜ್ಞಾನ ವಿಶ್ವ ವ್ಯಾಪಿಯಾಗುತ್ತಿರುವಂತೆಯೇ ರಾಷ್ಟ್ರದಲ್ಲಿ ಅಧಿಕಗೊಳ್ಳುತ್ತಿರುವ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಸಮಗ್ರ ಕಾಯಿದೆಯಾಂದನ್ನು ತರಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು ಈ ತಿಂಗಳ 26ರೊಳಗೆ ಕಾಯ್ದೆಯ ರೂಪುರೇಷೆಗಳನ್ನು ಇಂಟರ್ನೆಟ್ನಲ್ಲಿ ಅಳವಡಿಸಲಾಗುವುದು ಎಂದೂ ಹೇಳಿದರು. ಸೈಬರ್ ಕಂಪನಿಗಳಿಂದ ಮಾಹಿತಿ ಸಂಗ್ರಹಿಸಿ ಹಾಗೂ ಸಲಹೆ ಸೂಚನೆಗಳನ್ನು ಪಡೆದು ಆನಂತರ ಮುಂದಿನ ಬಜೆಟ್ ಅಧಿವೇಶನದಲ್ಲಿ ಕಾಯಿದೆಯನ್ನು ಮಂಡಿಸಲಾಗುವುದು ಎಂದ ಅವರು, ಈ ಕಾಯಿದೆ ಇಂಟರ್ನೆಟ್ ಭಯೋತ್ಪಾದನೆಯನ್ನು ಹತ್ತಿಕ್ಕುತ್ತದೆ ಎಂದರು.
ಇದಕ್ಕೂ ಮುನ್ನ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದೆ ಯುದ್ಧಗಳು ನಡೆಯುವುದು ಎರಡು ರಾಷ್ಟ್ರಗಳ ಸೇನೆಗಳ ನಡುವೆ ಅಲ್ಲ. ಎರಡು ಸಂಸ್ಕೃತಿಗಳ ನಡುವೆ. ಇದಕ್ಕಾಗಿ ನಮ್ಮ ದೂರದರ್ಶನ ಮಾಧ್ಯಮಗಳನ್ನು ಸಮರಕ್ಕೆ ಸಜ್ಜುಗೊಳಿಸಲಾಗುವುದು. ಇದು ನಮ್ಮ ಪ್ರಥಮ ಆದ್ಯತೆ ಆಗಿದೆ ಎಂದರು.
ಪಾಶ್ಚಾತ್ಯ ಟೀವಿ ಮಾಧ್ಯಮಗಳಿಂದಾಗಿ ಮನೆಮನಗಳನ್ನು ಪಾಶ್ಚಾತ್ಯ ಸಂಸ್ಕೃತಿ ಆವರಿಸುತ್ತಿದೆ. ಇದನ್ನು ಹತ್ತಿಕ್ಕಿ ನಮ್ಮ ಸಾಹಿತ್ಯ, ಸಂಸ್ಕೃತಿ, ಪರಂಪರೆ, ಜನಪದವನ್ನು ಬಿಂಬಿಸುವ ಕಾರ್ಯ ಮಾಡಬೇಕಾಗಿದೆ ಎಂದರು. ಜನರಿಗೆ ಆರೋಗ್ಯಪೂರ್ಣ ಮನರಂಜನೆ ನೀಡುವುದು ನಮ್ಮ ಗುರಿಯಾಗಿದೆ ಎಂದ ಅವರು, ರಾಮಾಯಣ - ಮಹಾಭಾರತ ಧಾರಾವಾಹಿಗಳು ಬರುತ್ತಿದ್ದ ಕಾಲದಲ್ಲಿ ಮಮ್ಮಿ - ಡ್ಯಾಡಿ ಸಂಸ್ಕೃತಿ ಮಾಯವಾಗಿ ತಾತಾಶ್ರೀ, ಮಾತಾಶ್ರೀ, ಪಿತಾಶ್ರೀ ಎಂಬ ಸಂಸ್ಕೃತಿ ನೆಲೆಯೂರಿತು ಎಂದೂ ಹೇಳಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications