ಚಿಕ್ಕಮಗಳೂರಿಗೆ ಆಗಮಿಸಿದ ಪಾಂಚಜನ್ಯರಥಯಾತ್ರೆಗೆ ಅದ್ಧೂರಿ ಸ್ವಾಗತ
ಚಿಕ್ಕಮಗಳೂರು : ದತ್ತ ಜಯಂತಿಯ ಕೊನೆಯ ದಿನವಾದ ಭಾನುವಾರ ದತ್ತ ಪೀಠದಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿಗಳು ಶಾಂತಿಯುತವಾಗಿ ನಡೆಯುತ್ತಿವೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಮಧ್ಯೆ ಕಾರ್ಯಕ್ರಮಗಳು ಆರಂಭವಾದ ದಿನದಿಂದಲೂ ಭಕ್ತಾದಿಗಳಿಗಿಂತ ಪೊಲೀಸರೇ ಹೆಚ್ಚಾಗಿರುವ ಬಾಬಾಬುಡನ್ಗಿರಿಯ ಗುಹಾಂತರ ದೇವಾಲಯ ಕ್ಷೇತ್ರದ ಜಿಲ್ಲಾ ಕೇಂದ್ರ ಚಿಕ್ಕಮಗಳೂರಿಗೆ ಶನಿವಾರ ಭಜರಂಗ ದಳದ ಪಾಂಚಜನ್ಯ ರಥಯಾತ್ರೆ ಆಗಮಿಸಿತು.
ನವೆಂಬರ್ 30ರಂದು ಶೃಂಗೇರಿಯಿಂದ ಹೊರಟ ಈ ರಥಯಾತ್ರೆ ಮಾಗಡಿ, ಕೈಮರ, ಅಂಬಳೆ, ಹಿರೇಮಗಳೂರು ಮಾರ್ಗವಾಗಿ ಶನಿವಾರ ಮಧ್ಯಾಹ್ನ ಚಿಕ್ಕಮಗಳೂರನ್ನು ಪ್ರವೇಶಿಸಿತು. ಜಿಲ್ಲೆಯಲ್ಲಿ ರಥಯಾತ್ರೆಗೆ ಅಭೂತಪೂರ್ವ ಹಾಗೂ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.
ಅಯೋಧ್ಯೆ ಸಂಸತ್ ಸದಸ್ಯ ಹಾಗೂ ಭಜರಂಗದಳದ ಸಂಸ್ಥಾಪಕ ಅಧ್ಯಕ್ಷರಾದ ವಿನಯ್ ಕಟಿಯಾರ್ ಮತ್ತು ರಾಜ್ಯ ಭಜರಂಗದಳದ ಸಂಚಾಲಕ ಪ್ರಮೋದ್ ಮುತಾಲಿಕ್ ಅವರು ಶನಿವಾರ ಬೆಳಗ್ಗೆ ಬಾಬಾ ಬುಡನ್ಗಿರಿಗೆ ತೆರಳಿ ದತ್ತ ಪಾದುಕೆಗಳಿಗೆ ಪೂಜೆ ಸಲ್ಲಿಸಿದರು.
ರಥಯಾತ್ರೆ ಜಿಲ್ಲಾ ಕೇಂದ್ರಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪ್ರಾರ್ಥನಾ ಮಂದಿರಗಳ ಬಳಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸಿದೆ.
ಅರ್ಚಕರ ನೇಮಕ್ಕೆ ಆಗ್ರಹ : ಈ ಮಧ್ಯೆ ಇಲ್ಲಿಗೆ ಆಗಮಿಸಿರುವ ಭಜರಂಗ ದಳದ ಅಧ್ಯಕ್ಷ ಕಟಿಯಾರ್ ಅವರು, ದತ್ತ ಪೀಠದಿಂದ ಬರುವ ಆದಾಯವನ್ನು ಇತರೆ ಉದ್ದೇಶಕ್ಕೆ ಬಳಸದೆ ನಿಧಿಯಾಂದನ್ನು ಸ್ಥಾಪಿಸಿ, ಹಿಂದೂಗಳ ಪವಿತ್ರ ಸ್ಥಳವಾಗಿರುವ ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲಿ ಹಿಂದೂ ಅರ್ಚಕರೊಬ್ಬರನ್ನು ನೇಮಿಸುವಂತೆಯೂ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications