ಕ್ಷಮೆಗೆ ಪಾತ್ರರಾದ ನವಾಜ್ ಷರೀಫ್, ಸೌದಿಗೆ ಗಡಿಪಾರು
ಇಸ್ಲಾಮಾಬಾದ್ : ಸರಕಾರದಿಂದ ಕ್ಷಮೆ ದೊರಕಿದ ತರುವಾಯ ಗಡಿಪಾರಿಗೆ ಒಳಗಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಭಾನುವಾರ ಬೆಳಗ್ಗೆ ತಮ್ಮ ದೇಶವನ್ನು ತೊರೆದು ಸೌದಿ ಅರೇಬಿಯಾಗೆ ಪ್ರಯಾಣ ಬೆಳೆಸಿದ್ದಾರೆ.
ಇಲ್ಲಿನ ಮಿಲಿಟರಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಷರೀಫ್ ತಮ್ಮ ಪತ್ನಿ ಹಾಗೂ ಇತರ 18 ಮಂದಿ ಕುಟುಂಬದ ಸದಸ್ಯರ ಜತೆಗೂಡಿದರು. 14 ತಿಂಗಳ ಹಿಂದೆ ಮಿಲಿಟರಿ ಆಡಳಿತಗಾರ ಜನರಲ್ ಮುಷಾರಫ್ ಅವರಿಂದ ಪದಚ್ಯುತರಾಗಿದ್ದ ಷರೀಫ್ ಆನಂತರ ಶನಿವಾರ ಸೌದಿ ಅರೇಬಿಯಾದಿಂದ ಇಲ್ಲಿಗೆ ಆಗಮಿಸಿದ್ದ ವಿಮಾನದಲ್ಲಿ ರಾಷ್ಟ್ರವನ್ನು ತೊರೆದು ಹೊರಟರು.
ಷರೀಫರ ಜತೆಗೆ ಅವರ ತಂದೆ ಮಿಯಾನ್ ಮೊಹಮ್ಮದ್ ಷರೀಫ್, ತಾಯಿ, ಹೆಂಡತಿ ಕುಲ್ಸೂಮ್, ಸೋದರರಾದ ಷಹಾಬಾಜ್ ಮತ್ತು ಅಬ್ಬಾಸ್, ಮಗ ಹುಸೇನ್, ಮಗಳು ಮರಿಯಮ್, ಅಸ್ಮಾ, ಅಳಿಯ ಸಫ್ದರ್, ಸೊಸೆ ಸಾಹಿರಾ ಮತ್ತು ಇತರ ಕುಟುಂಬ ವರ್ಗದವರೊಂದಿಗೆ ತೆರಳಿದ್ದಾರೆ.
ಷರೀಫ್ ಅವರು ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಯ ಆರೋಪಕ್ಕಾಗಿ ಸೆರೆವಾಸ ಅನುಭವಿಸುತ್ತಿದ್ದರು. ಅವರಿಗೆ ಜೀವಾವಧಿ ಶಿಕ್ಷೆಯೂ ಆಗಿತ್ತು. (ಐಎಎನ್ಎಸ್)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications