ಜನಗಣತಿಯಲ್ಲಿ ವೀರಶೈವರೆಂದೇ ದಾಖಲಿಸಲು ಮಠಾಧೀಶರ ಕರೆ
ಬೆಂಗಳೂರು : ವೀರಶೈವ ಜನಾಂಗದ ನಿಖರ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಜನಗಣತಿಯಲ್ಲಿ ವೀರಶೈವ - ಲಿಂಗಾಯಿತ ಎಂದೇ ಬರೆಸುವಂತೆ ತಮ್ಮ ಸಮುದಾಯಕ್ಕೆ ರಾಜ್ಯದ ವಿವಿಧ ಮಠಾಧೀಶರು ಹಾಗೂ ರಾಜಕೀಯ ಮುಖಂಡರು ಶನಿವಾರ ಬೆಂಗಳೂರಿನಲ್ಲಿ ಕರೆ ನೀಡಿದ್ದಾರೆ.
ಜನಗಣತಿಯ ಪಟ್ಟಿಯಲ್ಲಿ ವೀರಶೈವ - ಲಿಂಗಾಯತ ಎಂದು ಬರೆಸುವಂತೆ ಜನಜಾಗೃತಿ ಮೂಡಿಸಲು ಅಖಿಲ ಭಾರತ ವೀರಶೈವ ಮಹಾಸಭಾ ನಡೆಸುತ್ತಿರುವ ಜನಜಾಗೃತಿ ವಾಹಿನಿ ಜಾಥಾ ಶುಕ್ರವಾರ ಬೆಂಗಳೂರಿಗೆ ಆಗಮಿಸಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಮಲ್ಲೇಶ್ವರ ಆಟದ ಮೈದಾನದಲ್ಲಿ ಬೃಹತ್ ಸಮಾವೇಶವೂ ಜರುಗಿತು.
ಈ ಸಮಾವೇಶದಲ್ಲಿ ಸಿದ್ದಗಂಗಾ ಮಠಾಧೀಶರಾದ ಡಾ. ಶ್ರೀ ಶಿವಕುಮಾರ ಸ್ವಾಮಿ, ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮಿ, ಕನಕಪುರ ದೇಗುಲಮಠದ ಮುಮ್ಮಡಿ ನಿರ್ವಾಣ ಸ್ವಾಮಿ, ಮುಮ್ಮಡಿ ಮಹಾಲಿಂಗ ಸ್ವಾಮಿ, ರಾಜಾಪುರ ಮಠದ ಶ್ರೀ ರೇಣುಕಾಚಾರ್ಯ ಸ್ವಾಮಿಗಳು ಪಾಲ್ಗೊಂಡಿದ್ದರು.
ಸಾನ್ನಿಧ್ಯ ವಹಿಸಿ ಮಾತನಾಡಿದ ಸಿದ್ದಗಂಗಾ ಮಠಾಧೀಶರಾದ ಶಿವಕುಮಾರ ಸ್ವಾಮಿಗಳು, ವೀರಶೈವ ಸಮಾಜದಲ್ಲಿ ಒಳಪಂಗಡಗಳು ಹುಟ್ಟಿಕೊಳ್ಳುತ್ತಿವೆ. ಈ ಬೆಳವಣಿಗೆಯಿಂದ ಒಡಕೂ ಉಂಟಾಗುತ್ತಿದೆ. ಈ ಬಗ್ಗೆ ತಮ್ಮ ಸಮಾಜದವರು ಜಾಗೃತರಾಗಬೇಕು ಎಂದೂ ಹೇಳಿದರು. ಜನಗಣತಿಯಲ್ಲಿ ವೀರಶೈವ - ಲಿಂಗಾಯತ ಎಂದು ಬರೆಯಿಸಿ ಎಂಬ ಫಲಕವನ್ನೂ ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್, ಶಾಸಕ ಚಂದ್ರಕಾಂತ ಬೆಲ್ಲದ್, ವಿಶ್ವನಾಥ ರೆಡ್ಡಿ ಮುದ್ನಾಳ್, ಶಾಸಕ ರವಿಕಾಂತ ಪಾಟೀಲ್, ವಿಧಾನ ಪರಿಷತ್ ಸದಸ್ಯ ಎಂ.ವಿ. ರಾಜಶೇಖರನ್, ಪ್ರಮೀಳಾ ನೇಸರ್ಗಿ, ಬಿ.ಎಸ್. ಪರಮಶಿವಯ್ಯ, ಎಚ್.ವಿ. ನಾಗೇಂದ್ರಪ್ಪ ಮೊದಲಾದವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಚಿ.ಮೂ ಧರಣಿ : ಈ ಮಧ್ಯೆ ಸಮಾವೇಶವನ್ನು ಪ್ರತಿಭಟಿಸಿ ಹಾಗೂ ವೀರಶೈವರು ಹಿಂದೂಗಳಲ್ಲ ಎಂಬ ಅಖಿಲ ಭಾರತ ವೀರಶೈವ ಮಹಾಸಭಾದ ಹೇಳಿಕೆ ಖಂಡಿಸಿ ಕನ್ನಡ ಶಕ್ತಿ ಕೇಂದ್ರದ ಅಧ್ಯಕ್ಷ ಡಾ. ಚಿದಾನಂದ ಮೂರ್ತಿ ಶನಿವಾರ ಬೆಂಗಳೂರಿನ ಬಸವೇಶ್ವರ ಪ್ರತಿಮೆಯ ಮುಂದೆ ಧರಣಿ ಸತ್ಯಾಗ್ರಹವನ್ನೂ ನಡೆಸಿದರು.
ವಿಶಿಷ್ಟ ಧಾರ್ಮಿಕ ಪದ್ಧತಿ ಹೊಂದಿರುವ ತಮ್ಮದು ಪ್ರತ್ಯೇಕ ಧರ್ಮ ಎಂದು ಹೇಳಿಕೆ ನೀಡಿ ಮಹಾ ಸಭಾ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದೂ ಅವರು ಆರೋಪಿಸಿದರು.
ಬಹಿಷ್ಕಾರ : ಮಹಾ ಸಭಾದ ನಿರ್ಧಾರದ ವಿರುದ್ಧ ಧರಣಿ ನಡೆಸಿದ ಚಿದಾನಂದ ಮೂರ್ತಿ ಅವರಿಗೆ ವೀರಶೈವ ಮಹಾಸಭಾ ಬಹಿಷ್ಕಾರ ಹಾಕಿದೆ. ಬಹಿಷ್ಕಾರ ಹಾಕಿರುವ ವಿಷಯವನ್ನು ಮಹಾಸಭಾದ ಉಪಾಧ್ಯಕ್ಷರು ತಿಳಿಸಿದ್ದಾರೆ.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications