ಭೀಕರ ರಸ್ತೆ ದುರಂತ : ಮದುವೆಗೆ ಹೊರಟ 20 ಮಂದಿ ಮಸಣಕ್ಕೆ
ಬೆಂಗಳೂರು : ತಮಿಳು ನಾಡಿನ ಧರ್ಮ ಪುರಿ ಜಿಲ್ಲೆಯ ಸಿಂಗಂ ಪೇಟೆಯ ಬಳಿ ತಿಪಟೂರಿನ ಪಂಚನಾಥನ್ ಅವರ ಮಗನ ಮದುವೆ ದಿಬ್ಬಣವನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಕೆರೆಗೆ ಉರುಳಿ ಬಿದ್ದು ಬಸ್ಸಿನಲ್ಲಿದ್ದ ಇಬ್ಬರು ಮಕ್ಕಳೂ ಸೇರಿದಂತೆ 20 ಮಂದಿ ಮೃತ ಪಟ್ಟಿದ್ದಾರೆ.
ತಿರುವಣ್ಣಾ ಮಲೈ ಮಾರ್ಗದ ಸಿಂಗಂಪೇಟೆ ಕೆರೆ ಬಳಿ ಬುಧವಾರ ಮಧ್ಯಾಹ್ನ ಕಬ್ಬು ತುಂಬಿದ್ದ ಲಾರಿಯಾಂದು ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ ಕೆರೆಗೆ ಬಿದ್ದು ಮುಳುಗಿತು.
ಅಪಘಾತದಲ್ಲಿ ಪಂಚನಾಥನ್ ಅವರ ಕುಟುಂಬದ ಎಲ್ಲರೂ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು , ಮುರಳೀಧರ್(32), ನರಸಿಂಹ ಮೂರ್ತಿ (55), ಎಸ್. ಎಂ. ಮಂಜುನಾಥ(68), ವಾದ್ಯರಾಜ್(35), ನಾಗರತ್ನಂ (40), ಸುಲೋಚನಮ್ಮ (52), ಶೋಭಾ (28), ಶೈಲಕುಮಾರಿ (35), ಮಂಜುಳಾ(32), ಪುಷ್ಪಾ (23), ರಾಜಸಿರಿ (4) ಮತ್ತು ಗಣೇಶ (4) ಎಂದು ಗುರುತಿಸಲಾಗಿದೆ.
ಉಳಿದವರ ಮೃತ ದೇಹಗಳು ಬಸ್ಸಿನಲ್ಲಿ ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಬಸ್ಸನ್ನು ಹೊರತೆಗೆಯಲು ಕ್ರೇನ್ನ್ನು ಬಳಸಲಾಗುತ್ತಿದೆ. ಪ್ರಯಾಣಿಸುತ್ತಿದ್ದ 59 ಮಂದಿಯಲ್ಲಿ 38 ಮಂದಿ ಸುರಕ್ಷಿತವಾಗಿ ಪಾರಾಗಿದ್ದಾರೆ. ಮೂಲತಃ ತಮಿಳುನಾಡಿನವರಾದ ಪಂಚನಾಥನ್ ತಿಪಟೂರಿನಲ್ಲಿ ವ್ಯಾಪಾರ ನಡೆಸುತ್ತಿದ್ದರು. ಅವರ ಮಗ ರವಿಯ ವಿವಾಹ ಗುರುವಾರ ನಡೆಯಬೇಕಾಗಿತ್ತು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications