ನಿರ್ಲಕ್ಷ್ಯದಿಂದ ರೋಗಿಯ ಸಾವಿಗೆ ಕಾರಣರಾದ ವೈದ್ಯರಿಗೆ ಶಿಕ್ಷೆ
ಶಿವಮೊಗ್ಗ : - ಆಪರೇಷನ್ ಯಶಸ್ವಿ.. ಆದರೆ ರೋಗಿ ಸತ್ತ ಎಂಬ ಹಳೆಯ ಜನಜನಿತ ಮಾತು ನಿಮಗೂ ಗೊತ್ತು. ಶಸ್ತ್ರ ಚಿಕಿತ್ಸೆ ನಡೆಸುವಾಗ ಧಿವ್ಯ ನಿರ್ಲಕ್ಷ್ಯ ತೋರಿ ರೋಗಿಯಾಬ್ಬರ ಸಾವಿಗೆ ಕಾರಣರಾದ ವೈದ್ಯರಿಗೆ ಶಿವಮೊಗ್ಗದ ಜಿಲ್ಲಾ ಮುಖ್ಯ ಸತ್ರ ನ್ಯಾಯಾಲಯ 6 ತಿಂಗಳ ಶಿಕ್ಷೆ ಹಾಗೂ ಎರಡು ಸಾವಿರ ರುಪಾಯಿ ದಂಡ ವಿಧಿಸಿದೆ.
ನ್ಯಾಯಮೂರ್ತಿಗಳಾದ ಹೊಸಗೌಡರ್ ಬುಧವಾರ ಈ ತೀರ್ಪು ನೀಡಿದ್ದಾರೆ. ನಗರದ ಸವಳಂಗ ರಸ್ತೆಯಲ್ಲಿರುವ ದತ್ತಾ ನರ್ಸಿಂಗ್ ಹೊಂನ ತಜ್ಞ ವೈದ್ಯರಾದ ಡಾ. ಆರ್.ಡಿ. ಪ್ರಭು ಅವರು ತಮ್ಮ ವೃತ್ತಿಯಲ್ಲಿ ತೋರಿದ ನಿರ್ಲಕ್ಷ್ಯಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ.
1998ರ ಫೆಬ್ರುವರಿಯಲ್ಲಿ ಪಿತ್ತಕೋಶದ ಚಿಕಿತ್ಸೆಗಾಗಿ ರಮೇಶ್ ಶೆಣೈ ಎಂಬ ರೋಗಿ ಡಾ. ಆರ್.ಡಿ. ಪ್ರಭು ಅವರ ಬಳಿ ಚಿಕಿತ್ಸೆ ಪಡೆಯಲು ದತ್ತಾ ನರ್ಸಿಂಗ್ ಹೋಂಗೆ ದಾಖಲಾಗಿದ್ದರು. ಫೆ. 6ರಂದು ವೈದ್ಯ ಪ್ರಭು ರೋಗಿಯ ಶಸ್ತ್ರ ಚಿಕಿತ್ಸೆ ನಡೆಸಿದ್ದರು. ಶಸ್ತ್ರ ಚಿಕಿತ್ಸೆಯ ನಂತರ ರೋಗಿ ರಮೇಶ್ ಸತತ ವಾಂತಿ ಹಾಗೂ ಜ್ವರದಿಂದ ಬಳಲುತ್ತಿದ್ದುದರಿಂದ ಅನುಮಾನಗೊಂಡ ರೋಗಿಯ ಮನೆಯವರು ರಮೇಶ್ರನ್ನು ಮಣಿಪಾಲ್ ಆಸ್ಪತ್ರೆಗೆ ಸೇರಿಸಿದ್ದರು.
ಅಲ್ಲಿ ಪುನಾ ಶಸ್ತ್ರ ಚಿಕಿತ್ಸೆ ನಡೆಸಿದಾಗ ರೋಗಿಯ ಹೊಟ್ಟೆಯಲ್ಲಿ ಬ್ಯಾಂಡೇಜ್ ಬಟ್ಟೆಯ ಕಟ್ಟು ಇದ್ದದ್ದು ಪತ್ತೆಯಾಯಿತು. ಬ್ಯಾಂಡೇಜ್ ಬಟ್ಟೆ ಹೊಟ್ಟೆಯಲ್ಲಿ ಸೇರಿದ್ದರಿಂದ ರೋಗಿಯ ದೇಹಸ್ಥಿತಿ ಗಂಭೀರವಾಗಿ ಹೋಗಿತ್ತು. ಮರು ಶಸ್ತ್ರಚಿಕಿತ್ಸೆಯ ನಂತರವೂ ರೋಗಿ ಫೆಬ್ರುವರಿ 26ರಂದು ಸಾವನ್ನಪ್ಪಿದರು.
ಮೃತರ ಪತ್ನಿ ನಿರುಪಮಾ ಶೆಣೈ ಅವರು ಈ ಬಗ್ಗೆ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿ. ತಮ್ಮ ಪತಿಯ ಸಾವಿಗೆ ಮೊದಲು ಶಸ್ತ್ರಚಿಕಿತ್ಸೆ ನಡೆಸಿದ ದತ್ತಾ ನರ್ಸಿಂಗ್ ಹೋಂ ವೈದ್ಯರೇ ಕಾರಣ ಎಂದು ಆರೋಪಿಸಿದ್ದರು. ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು ಎರಡನೇ ಬಾರಿಗೆ ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರಿಂದ ಸಮರ್ಪಕ ಮಾಹಿತಿ ಸಂಗ್ರಹಿಸಿ, ಆರೋಪಿ ವೈದ್ಯರಿಗೆ ಎರಡು ಸಾವಿರ ರುಪಾಯಿ ದಂಡ ಹಾಗೂ 6 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications