ಆಗತ್ಯ ಸೇವೆ ನಿರ್ವಹಣೆ ಕಾಯ್ದೆಗೂ ಜಗ್ಗೆವು : ಅಂಚೆ ನೌಕರ ಸಮಿತಿ
ಬೆಂಗಳೂರು: ಪಟ್ಟು ಸಡಿಲಿಸದೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಅಂಚೆ ನೌಕರರು ನಡೆಸುತ್ತಿರುವ ಮುಷ್ಕರ ರಾಜ್ಯದಲ್ಲೂ ಹತ್ತು ದಿನ ಪೂರೈಸಿದೆ. ಮುಷ್ಕರವನ್ನು ಕೇಂದ್ರ ಸರಕಾರ ಕಾನೂನು ಬಾಹಿರ ಎಂದು ಘೋಷಿಸಿಯಾಗಿದೆ.
ಹಠ ಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ರಾಜ್ಯ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಅವರು ರಾಜ್ಯದ ಅಂಚೆ ಇಲಾಖೆ ನೌಕರರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಅವರು ಹೊರಡಿಸಿರುವ ಸುತ್ತೋಲೆಯಲ್ಲಿ ನ್ಯಾಯಾಲಯ ನೀಡಿರುವ ತೀರ್ಪುನ್ನು ಉಲ್ಲೇಖಿಸಿ, ಕೆಲಸಕ್ಕೆ ಹಾಜರಾಗದಿದ್ದಲ್ಲಿ ಎಸ್ಮಾ ಜಾರಿ ಗೊಳಿಸಲೂ ಅವಕಾಶ ಇದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.
ಅಂಚೆ ಇಲಾಖೆಯ ಮೇಲಿರುವ ಗುರುತರ ಜವಾಬ್ದಾರಿ ಅರಿತು, ಬಡಜನರಿಗೆ ಉಂಟಾಗಿರುವ ತೊಂದರೆ ಗಮನದಲ್ಲಿಟ್ಟುಕೊಂಡು ಕೆಲಸಕ್ಕೆ ಹಾಜರಾಗುವಂತೆ ಮಾಧ್ಯಮಗಳ ಮೂಲಕವೂ ಅವರು ಮನವಿ ಮಾಡಿದ್ದಾರೆ. ಅಂಚೆ ಸೇವೆ ಸಹಜ ಸ್ಥಿತಿಗೆ ಬರುವುದಕ್ಕೆ ಯಾರಾದರೂ ಅಡ್ಡಿ ಪಡಿಸಿದರೆ ಅದು ನ್ಯಾಯಾಲಯ ನಿಂದನೆ ಆಗುತ್ತದೆ ಎಂದೂ ಅವರು ಹೇಳಿದ್ದಾರೆ.
ಎಸ್ಮಾಕ್ಕೆ ಹೆದರೆವು : ಈ ಮಧ್ಯೆ ತಮ್ಮ ಬೇಡಿಕೆ ಈಡೇರುವ ತನಕ ಹೋರಾಟ ಮುಂದುವರಿಸುತ್ತೇವೆ ಎಂದು ಘೋಷಿಸಿರುವ ಕರ್ನಾಟಕದ ಅಂಚೆ ನೌಕರರ ಸಂಯುಕ್ತ ಕ್ರಿಯಾ ಸಮಿತಿ, ಎಸ್ಮಾ ವಿರುದ್ಧವೂ ಹೋರಾಟಕ್ಕೂ ಸಿದ್ಧ ಎಂದು ಸಾರಿದೆ. ಕಳೆದ ಎರಡು ವರ್ಷಗಳಿಂದಲೂ ಸರಕಾರ ನೀಡಿದ ಪೊಳ್ಳು ಭರವಸೆಗಳನ್ನು ನಂಬಿ ನಾವು ಕೂತಿದ್ದೇವೆ. ಆದರೆ ಈವರೆಗೆ ತಮ್ಮ ಬೇಡಿಕೆಗಳು ಈಡೇರಿಲ್ಲ ಎಂದು ಸಮಿತಿಯ ಸಂಚಾಲಕ ಸವಣೂರ್ ತಿಳಿಸಿದ್ದಾರೆ.
ಈಗ ಸರಕಾರ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಬದಲು ಬಲತ್ಕಾರದಿಂದ ಕೆಲಸ ಸಾಧಿಸುವ ಮಾರ್ಗ ಅನುಸರಿಸುತ್ತಿರುವುದು ದುರ್ದೈವ. ನಮ್ಮ ಕೇಂದ್ರ ಸಮಿತಿಯ ಸದಸ್ಯರು ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ, ಆದರೆ ಅದು ಫಲಪ್ರದವಾಗಿಲ್ಲ ಎಂದೂ ಅವರು ಹೇಳಿದರು. ಮುಷ್ಕರದಿಂದ ಜನರಿಗಾಗುತ್ತಿರುವ ತೊಂದರೆಯ ಬಗ್ಗೆ ನಮಗೂ ವಿಷಾದವಿದೆ ಆದರೆ, ಸರಕಾರ ನಮ್ಮ ಬೇಡಿಕೆಗಳ ಈಡೇರಿಕೆಯ ಬಗ್ಗೆ ಗಮನ ಹರಿಸದೆ, ತಾಳ್ಮೆ ಪರೀಕ್ಷಿಸಿದೆ ಮಿಗಿಲಾಗಿ ಪರ್ಯಾಯ ಕ್ರಮಗಳ ಬಗ್ಗೆಯೇ ಚಿಂತಿಸುತ್ತಾ ನೌಕರರ ಕ್ಷೇಮವನ್ನು ಮರೆತಿದೆ ಎಂದೂ ಅವರು ಆರೋಪಿಸಿದ್ದಾರೆ.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications