ಬಸ್ಸಿಗೆ ಕಾಯುತ್ತಿದ್ದವರ ಮೇಲೆ ಹರಿದ ಲಾರಿ: ಆರು ಮಂದಿ ದುರ್ಮರಣ
ಬೆಳಗಾವಿ : ಇಲ್ಲಿನ ಹಲಗಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಲಾರಿ ಅಪಘಾತದ ದುರಂತದಲ್ಲಿ ಒಂದೇ ಕುಟುಂಬದ ಐದು ಮಂದಿ ಮಹಿಳೆಯರೂ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ.
ಗುರುವಾರ ಬೆಳಿಗ್ಗೆ ಹತ್ತೂಮುಕ್ಕಾಲರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ ಬಳಿ ಬಸ್ಸು ಕಾಯುತ್ತಿದ್ದ ಒಬ್ಬ ಬಾಲಕ, ನಾಲ್ವರು ಹೆಂಗಸರು ಹಾಗೂ ಒಬ್ಬ ಬಾಲಕಿಯ ಮೇಲೆ, ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುತ್ತಿದ್ದ ಲಾರಿ ಹರಿದಾಗ ಮೂವರು ಮಹಿಳೆಯರು ಸ್ಥಳದಲ್ಲಿಯೇ ಮೃತರಾದರು. ಮತ್ತೊಬ್ಬ ಮಹಿಳೆ ಆಸ್ಪತ್ರೆಯ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರೆ, ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೃತನಾದ.
ರಾಜ್ಯ ರಸ್ತೆ ಸಾರಿಗೆಯ ಬೆಳಗಾವಿ ಮರಕಟ್ಟಿ ಬಸ್ಸು ಪಂಕ್ಚರ್ ಆಗಿ ಕೆಟ್ಟಿರುವುದರಿಂದ ನತದೃಷ್ಟ ಮಹಿಳೆಯರು ಬೇರೆ ಬಸ್ಸಿಗಾಗಿ ಕಾಯುತ್ತಿದ್ದರು. ಡಿಕ್ಕಿ ಹೊಡೆದ ಟಿಪ್ಪರ್ ಲಾರಿ ಬೆಳಗಾವಿಯ ಸಾಂಬ್ರಾ ಏರ್ಫೋರ್ಸ್ ಸ್ಪೇಷನ್ನ ಕ್ಯಾಂಟೀನ್ಗೆ ಗೃಹ ಬಳಕೆಯ ಸರಕನ್ನು ಸಾಗಿಸುತ್ತಿದ್ದು, ಚಾಲಕ ಚೆನ್ನವೀರಯ್ಯನ ಪ್ರಕಾರ ಲಾರಿ ಬ್ರೇಕ್ ಫೈಲ್ ಆಗಿರುವುದರಿಂದ ಅಪಘಾತ ಘಟಿಸಿದೆ. ಆದರೆ ಪೊಲೀಸರು ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.
ಮೃತ ಪಟ್ಟವರನ್ನು, ಬಡಾಲನ ಅಂಕಲಗಿಯ ಕಾಶವ್ವ ರುದ್ರಪ್ಪ ಶಿವಪ್ಪನವರ್(40), ಮಲ್ಲವ್ವಾ ಭರಮಪ್ಪ ಹುಂದ್ರಿ(55), ರುದ್ರವ್ವಾ ರಾಮಲಿಂಗ ಬಾನಿ(40), ಕಮಲವ್ವ ನಾಗಪ್ಪ ಜಾಡರ್ (40), ಮತ್ತು ಗಿರಿಯಾಲದ ಈರಣ್ಣ ಬಸವಂತ ಇಟಗಿ (10) ಎಂದು ಗುರುತಿಸಲಾಗಿದೆ.
(ಇನ್ಫೋ ವಾರ್ತೆ)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications