ಹೊಸ ಜವಳಿ ನೀತಿಯಿಂದ ರಫ್ತು ಅಭಿವೃದ್ಧಿ : ಧನಂಜಯಕುಮಾರ್
ಹುಬ್ಬಳ್ಳಿ : ಹೊಸ ಜವಳಿ ನೀತಿಯ ಅನುಷ್ಠಾನದಿಂದ ರಾಷ್ಟ್ರದ ರಫ್ತು ವ್ಯವಹಾರ ಮುಂದಿನ ಹತ್ತು ವರ್ಷಗಳ ಅವಧಿಯಲ್ಲಿ ಹತ್ತು ಪಟ್ಟು ಹೆಚ್ಚಲಿದ್ದು, 2010ನೇ ಇಸವಿಯ ವೇಳೆಗೆ ಅದು 50 ಬಿಲಿಯನ್ ಡಾಲರ್ಗಳಿಗೆ ಏರಲಿದೆ ಎಂಬ ವಿಶ್ವಾಸವನ್ನು ಕೇಂದ್ರ ಜವಳಿ ಸಚಿವ ವಿ. ಧನಂಜಯ ಕುಮಾರ್ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಆಗಮಿಸಿದ್ದ ಸಚಿವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ರಾಷ್ಟ್ರದ ಹಾಲಿ ರಫ್ತು ವ್ಯವಹಾರ 5 ಬಿಲಿಯನ್ಗಳಾಗಿವೆ ಎಂದರು. ಮುಂದಿನ ದಿನಗಳಲ್ಲಿ ರಾಷ್ಟ್ರ ಜಗತ್ತಿನ ಹತ್ತಿ ಹಾಗೂ ರೇಷ್ಮೆ ವ್ಯಾಪಾರೋದ್ಯಮದ ಸಿಂಹ ಪಾಲನ್ನು ಗಳಿಸಿಕೊಳ್ಳಲಿದೆ. ಇದಕ್ಕೆ ಹೊಸ ಜವಳಿ ನೀತಿ ಸಹಕಾರಿಯಾಗಲಿದೆ ಎಂದರು.
ಸ್ಪಿನ್ನಿಂಗ್ ಮೀಲ್ಗಳ ಅಭಿವೃದ್ಧಿಗೆ ಗಮನ ಹರಿಸಲಾಗಿದ್ದು, ಪ್ರತಿ ಘಟಕವನ್ನು 5 ಲಕ್ಷ ರುಪಾಯಿ ಅನುದಾನ ಹಾಗೂ 15 ಲಕ್ಷ ರುಪಾಯಿ ಸಾಲದ ನೆರವು ನೀಡುವ ಮೂಲಕ ಒಟ್ಟು 20 ಲಕ್ಷ ರುಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದರು.
ಜವಳಿ ನೀತಿಯ ಪರಿಣಾಮವಾಗಿ ವಸ್ತ್ರೋದ್ಯಮ ಸೇರಿದಂತೆ ವಿವಿಧ ಉದ್ಯಮಗಳಿಗೆ ಸಂಬಂಧಿಸಿದಂತೆ ಭಾರತದ ರಫ್ತು ವ್ಯವಹಾರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದೂ ತಿಳಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications