Get Updates
Get notified of breaking news, exclusive insights, and must-see stories!

ತಲಪಾಡಿ - ಬೈಂದೂರು ಚತುಷ್ಪಥ ರಸ್ತೆ - ರಾಜ್ಯ ಪರಿಶೀಲನೆ : ಮೊಯ್ಲಿ

ಮಂಗಳೂರು : ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌ನಿಂದ 285 ಕೋಟಿ ರುಪಾಯಿ ನೆರವು ಪಡೆಯಲು ರಾಜ್ಯ ಸರಕಾರ ತನ್ನ ಅಂಗೀಕಾರ ನೀಡಿದೆ. ಬಂದರು ಹಾಗೂ ಮೀನುಗಾರಿಕೆ ಸಚಿವ ಬಿ. ರಾಮನಾಥ ರೈ ಈ ವಿಷಯ ಪ್ರಕಟಿಸಿದ್ದಾರೆ.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ವಹಿಸಲಾದ ವಿವಿಧ ಯೋಜನೆಗಳನ್ನು ಉದ್ಘಾಟಿಸಿ, ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವರೂ ಆದ ರಾಮನಾಥ ರೈ ಅವರು, ರಾಜ್ಯದ ರಾಜಧಾನಿ ಬೆಂಗಳೂರಿನ ನಂತರ ಅತ್ಯಂತ ತ್ವರಿತ ಗತಿಯಲ್ಲಿ ಬೆಳೆಯುತ್ತಿರುವ ಹಾಗೂ ಅಭಿವೃದ್ಧಿಯ ಪಥದಲ್ಲಿ ನಾಗಾಲೋಟದಿಂದ ಸಾಗುತ್ತಿರುವ ನಗರ ಮಂಗಳೂರು ಎಂದು ಹೇಳಿದರು.

ಕರಾವಳಿ ತೀರದ ನಗರಗಳ ಅಭಿವೃದ್ಧಿಗೆ ರಾಜ್ಯ ಸರಕಾರ ಯೋಜನೆ ರೂಪಿಸಿದೆ ಎಂದೂ ಅವರು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯ ತೆರಿಗೆ ಸುಧಾರಣೆ ಆಯೋಗದ ಅಧ್ಯಕ್ಷ ಎಂ. ವೀರಪ್ಪ ಮೊಯ್ಲಿ ಅವರು ತಲಪಾಡಿ - ಬೈಂದೂರು ನಡುವಿನ ನಾಲ್ಕು ದಾರಿಗಳ ಯೋಜನೆ (ಚತುಷ್ಪಥ) ಯನ್ನು ಕೇಂದ್ರ ಸರಕಾರ ಕೈಗೆತ್ತಿಕೊಳ್ಳದಿದ್ದರೆ, ರಾಜ್ಯ ಸರಕಾರವೇ ಅದನ್ನು ನಿರ್ವಹಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.

ಈ ಯೋಜನೆಗೆ ಆರ್ಥಿಕ ಸಮಸ್ಯೆ ಎದುರಾದರೆ, ನಿಗಮವೊಂದನ್ನು ರಚಿಸಿ, ಹಣ ಸಂಗ್ರಹಿಸಲಾಗುವುದು ಎಂದರು. ಮಂಗಳೂರಿನಲ್ಲಿ ಸ್ಥಳೀಯ ರೈಲು ಸಂಚಾರ ಯೋಜನೆಯಾಂದರ ಯೋಜನೆಯ ಬಗ್ಗೆಯೂ ಪ್ರಸ್ತಾಪಿಸಿದ ಮೊಯ್ಲಿ, ಈ ಬಗ್ಗೆ ಸಮಾಲೋಚನೆ ನಡೆಯಬೇಕು ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಂಗಳೂರು ಶಾಸಕ ಯೋಗೀಶ್‌ ಭಟ್‌ ಮಾತನಾಡಿ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಯೋಜನೆ ರಚಿಸುವಂತೆ ಸರ್ವ ಪಕ್ಷ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಒತ್ತಾಯಿಸಬೇಕು ಎಂದೂ ಸಲಹೆ ಮಾಡಿದರು. ಅವರು, ಮಂಗಳಾ ಕ್ರೀಡಾಂಗಣದ ಬಳಿ 7 ಲಕ್ಷ ರುಪಾಯಿ ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ ಜಿಮ್ನಾಷಿಯಂ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು.

ಮಾಜಿ ಸಚಿವರಾದ ಬ್ಲೇಸಿಯಸ್‌ ಡಿಸೋಜ, ಮೂಡ ಅಧ್ಯಕ್ಷ ಕೆ. ತೇಜೋಮಯ ಅವರು ಸಮಾರಂಭದಲ್ಲಿ ಹಾಜರಿದ್ದರು. (ಮಂಗಳೂರು ಪ್ರತಿನಿಧಿಯಿಂದ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+