ವೀರಪ್ಪನ್ನ್ನು ಖಂಡಿತಾ ಹಿಡಿಯುತ್ತೇವೆ-ಮುಖ್ಯಮಂತ್ರಿ ಎಸ್.ಎಂ. ಕೃಷ್ಣ
ಚೆನ್ನೈ : ಯಶಸ್ವಿ ವೀರಪ್ಪನ್ ಶಿಕಾರಿಯ ಬಗ್ಗೆ ಉಭಯ ರಾಜ್ಯಗಳು ಹಾಗೂ ಕೇಂದ್ರ ಸರ್ಕಾರ ಆಶಾಭಾವನೆ ಹೊಂದಿದ್ದು, ಕಾರ್ಯಾಚರಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿವೆ ಎಂದು ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರೊಂದಿಗೆ ಸೋಮವಾರ ಬೆಳಿಗ್ಗೆ ಮಾತುಕತೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ವೀರಪ್ಪನ್ ಶಿಕಾರಿಗೆ ಕೇಂದ್ರ ಸರ್ಕಾರ ನೀಡಿರುವ ನೆರವಿನ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಅವರು, ವೀರಪ್ಪನ್ ಕಾರ್ಯಾಚರಣೆ ಉಭಯ ರಾಜ್ಯಗಳ ಪೊಲೀಸ್ ಪಡೆಗಳ ಕೆಲಸ ಎನ್ನುವ ಕೇಂದ್ರ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ರ ಪುನರುಚ್ಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ರಾಜ್ ಬಿಡುಗಡೆ ಸಂಬಂಧದಲ್ಲಿ ಎಲ್ಲಾ ರೀತಿಯ ಸಹಕಾರ ನೀಡಿದ ಕರುಣಾನಿಧಿ ಹಾಗೂ ತಮಿಳುನಾಡು ಸರ್ಕಾರಕ್ಕೆ ಧನ್ಯವಾದ ಹೇಳಲು ತಾವು ಚೆನ್ನೈಗೆ ಆಗಮಿಸಿರುವುದಾಗಿ ಹೇಳಿದ ಅವರು, ಟಾಡಾ ಬಂಧಿಗಳ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ವಿಶೇಷ ನ್ಯಾಯಾಧೀಶರನ್ನು ನೇಮಿಸಿದೆ. ವಿಚಾರಣೆ ಜನವರಿ 6 ರಿಂದ ಪ್ರಾರಂಭವಾಗುತ್ತದೆ ಎಂದರು.
ವೀರಪ್ಪನ್ ಪತ್ತೆಗೆ ವೈಮಾನಿಕ ಸಮೀಕ್ಷೆ : ದಂತಚೋರ ವೀರಪ್ಪನ್ನ ಚಲನವಲನಗಳನ್ನು ಗುರ್ತಿಸಲು ಕೊಯಮತ್ತೂರು ಹಾಗೂ ನೀಲಗಿರಿ ಅರಣ್ಯ ಪ್ರದೇಶಗಳಲ್ಲಿ ಭಾನುವಾರ ವೈಮಾನಿಕ ಕಾರ್ಯಾಚರಣೆ ನಡೆಸಿರುವುದಾಗಿ ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.
ಹಂದಿಯೂರು, ಸತ್ಯಮಂಗಲ ಹಾಗೂ ಕದಂಬೂರು ಅರಣ್ಯ ಪ್ರದೇಶಗಳಲ್ಲೂ ಇಂಥದ್ದೇ ಕಾರ್ಯಾಚರಣೆ ನಡೆಯಲಿದ್ದು, ಈ ಕಾರ್ಯಾಚರಣೆಯಲ್ಲಿ ಎಸ್ಟಿಎಫ್ಗೆ ಗಡಿ ಭದ್ರತಾ ಪಡೆ ಸಹಕರಿಸುವುದು. ಪ್ರಸ್ತುತ ನೀಲಗಿರಿ ಅರಣ್ಯ ಪ್ರದೇಶದಲ್ಲಿ ವೀರಪ್ಪನ್ ಇರುವುದಾಗಿ ನಂಬಲಾಗಿದ್ದು , ಆತ ಕೇರಳ ಇಲ್ಲವೇ ಕರ್ನಾಟಕದ ಅರಣ್ಯ ಪ್ರದೇಶಗಳಿಗೆ ತನ್ನ ಅಡಗುತಾಣ ಪ್ರವೇಶಿಸದಂತೆ ಎಸ್ಟಿಎಫ್ ಕಟ್ಟೆಚ್ಚರ ವಹಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
(ಯುಎನ್ಐ/ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications